Advertisement

BMTC ಬಸ್‌ ನಿಲ್ದಾಣದಲ್ಲಿ ನಿರ್ಮಿಸಿದ್ದ ತಂಗುದಾಣವನ್ನೇ ದೋಚಿದ ಕಳ್ಳರು!

03:21 PM Oct 06, 2023 | Team Udayavani |

ಬೆಂಗಳೂರು: ನಗರದಲ್ಲಿ ಕೇವಲ ಒಂದು ತಿಂಗಳ ಹಿಂದೆ ನಿರ್ಮಿಸಿದ್ದ ಬಿಎಂಟಿಸಿ ಬಸ್‌ ನಿಲ್ದಾಣದ ತಂಗುದಾಣವನ್ನೇ ಕಳ್ಳರು ದೋಚಿದ್ದಾರೆ!

Advertisement

ನಗರ ಪೊಲೀಸ್‌ ಆಯಕ್ತರ ಕಚೇರಿಯ ಕೂಗಳತೆ ದೂರದಲ್ಲಿ ತಿಂಗಳ ಹಿಂದಷ್ಟೇ 10 ಲಕ್ಷ ರೂ.ನಲ್ಲಿ ನಿರ್ಮಿಸಿದ್ದ ಬಿಎಂಟಿಸಿ ತಂಗುದಾಣವನ್ನು ಕಳವು ಮಾಡಲಾಗಿದೆ.

ಈ ಸಂಬಂಧ ತಂಗುದಾಣ ನಿರ್ಮಾಣ ಮಾಡಿದ್ದ ಖಾಸಗಿ ಸಂಸ್ಥೆಯ ಉಪಾಧ್ಯಕ್ಷ ಎನ್‌.ರವಿ ರೆಡ್ಡಿ ಎಂಬವರು ಹೈಗ್ರೌಂಡ್ಸ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಬಿಬಿಎಂಪಿ ಅನುಮತಿ ಪಡೆದು ತಮ್ಮ ಕಂಪನಿಯ ಕನ್ನಿಂಗ್‌ಹ್ಯಾಮ್‌ ರಸ್ತೆಯಲ್ಲಿರುವ ಕಾಫಿಡೇ ಮುಂಭಾಗ ಹತ್ತು ಲಕ್ಷ ರೂ. ವೆಚ್ಚದಲ್ಲಿ ಆ.21ರಂದು ಸ್ಟೇನ್‌ ಲೇಸ್‌ ಸ್ಟೀಲ್‌ ಬಳಸಿ ಬಸ್‌ ತಂಗುದಾಣ ನಿರ್ಮಾಣ ಮಾಡಲಾಗಿತ್ತು.

ಆ.28ರಂದು ಎಲ್ಲ ಬಸ್‌ ನಿಲ್ದಾಣಗಳನ್ನು ಪರೀಕ್ಷಣೆ ಮಾಡುವಂತೆ ಇಲ್ಲಿಗೂ ಬಂದು ನೋಡಿದಾಗ ಬಸ್‌ ನಿಲ್ದಾಣವೇ ನಾಪತ್ತೆಯಾಗಿತ್ತು. ಕೂಡಲೇ ಬಿಬಿಎಂಪಿ ಅಧಿಕಾರಿಗಳಿಗೆ ಕರೆ ಮಾಡಿ ವಿಚಾರಿಸಿದಾಗ, ತಾವು ಬಸ್‌ ನಿಲ್ದಾಣ ತೆರವುಗೊಳಿಸಿಲ್ಲ ಎಂದು ಮಾಹಿತಿ ನೀಡಿದ್ದಾರೆ.

Advertisement

ಅದರಿಂದ ಅಚ್ಚರಿಗೊಳಗಾದ ಖಾಸಗಿ ಕಂಪನಿಯ ಉಪಾಧ್ಯಕ್ಷ ರವಿ ರೆಡ್ಡಿ ಸೆ.30ರಂದು ಹೈಗ್ರೌಂಡ್ಸ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಈ ಸಂಬಂಧ ತನಿಖೆ ನಡೆಯುತ್ತಿದೆ. ಸಿಸಿ ಕ್ಯಾಮೆರಾ ದೃಶ್ಯಾವಳಿ ಗಳನ್ನುಸಂಗ್ರಹಿಸಿ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next