Advertisement

Muda ಸೈಟ್ ಹಿಂತಿರುಗಿಸಿರುವ ಸಿದ್ದರಾಮಯ್ಯ ಪತ್ನಿಯ ಕ್ರಮಕ್ಕೆ ತಿಮ್ಮಾಪುರ ಪ್ರತಿಕ್ರಿಯೆ

04:43 PM Oct 02, 2024 | Team Udayavani |

ಮುಧೋಳ: ಯಜಮಾನರಿಗೆ ಮುಜುಗರವನ್ನುಂಟು ಮಾಡುವ ಯಾವ ಆಸ್ತಿಯೂ ನನಗೆ ದೊಡ್ಡದಲ್ಲ‌ ಎನ್ನುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಧರ್ಮಪತ್ನಿ ತಮಗೆ ಮುಡಾ ನೀಡಿದ್ದ ಸೈಟ್ ಗಳನ್ನು ಮರಳಿ ನೀಡಿ ಪತಿಯ ದಾರಿಯಲ್ಲಿ ನಡೆದು ಸಮಾಜಕ್ಕೆ‌ ಮಾದರಿಯಾಗಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ ಹೇಳಿದರು.

Advertisement

ಅ.2ರ ಬುಧವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಡಾ ಪ್ರಕರಣದಲ್ಲಿ ಅನವಶ್ಯಕವಾಗಿ ನಮ್ಮ ಯಜಮಾನರ ಹೆಸರು ತಳಕು ಹಾಕಲಾಗುತ್ತಿದೆ. ಅವರ ಎದುರು ನನಗೆ ಯಾವ ಆಸ್ತಿಯೂ ದೊಡ್ಡದಲ್ಲ. ಅವರ ಕಳಂಕರಹಿತ ರಾಜಕೀಯ ಜೀವನಕ್ಕೆ ಮಸಿ ಬಳಿಯುವ ಹುನ್ನಾರ ನಡೆಯುತ್ತಿದೆ ಎಂಬ ಬೇಸರ ಅವರಲ್ಲಿ ಮನೆ ಮಾಡಿದೆ ಎಂದು ತಿಳಿಸಿದರು.

ಆದರೆ ಪ್ರತಿಯೊಂದರಲ್ಲೂ ತಪ್ಪು ಹುಡುಕುವ ವಿರೋಧಿಗಳು ಅದಕ್ಕೆ ಅಪಾರ್ಥ ಕಲ್ಪಿಸುತ್ತಿದ್ದಾರೆ. ಇದು ಸರಿಯಾದ ಕ್ರಮವಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರ ಪಾತ್ರ ಏನೆಂಬುದರ ಬಗ್ಗೆ ತಿಳಿಸಿದ ರಾಜಕೀಯ ವಿರೋಧಿಗಳು ವಿನಾಕಾರಣ ಅವರ ಹೆಸರು ಎಳೆದು ತರುತ್ತಿದ್ದಾರೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next