Advertisement

ಆರ್‌ಟಿಇ ಕಾಯ್ದೆ ತಿದ್ದುಪಡಿಗೆ ಚಿಂತನೆ: ಸಚಿವ ತನ್ವೀರ್‌ ಸೇಠ್

07:35 AM Sep 18, 2017 | Team Udayavani |

ರಾಯಚೂರು: “ಆರ್‌ಟಿಇ ಕಾಯ್ದೆಯಿಂದ ಸರ್ಕಾರಕ್ಕೆ ಸಾಕಷ್ಟು ಹೊರೆಯಾಗುತ್ತಿದ್ದು, ಕಾಯ್ದೆಗೆ ತಿದ್ದುಪಡಿ ತರುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗುತ್ತಿದೆ’ ಎಂದು ಶಿಕ್ಷಣ ಸಚಿವ ತನ್ವೀರ್‌ ಸೇಠ್ ತಿಳಿಸಿದರು.  

Advertisement

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, “ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಿಗೆ ಆರ್‌ಟಿಇ ಅಡಿ ಪ್ರವೇಶಾತಿ ಕಲ್ಪಿಸಲಾಗಿತ್ತು. ನಾವು ಖಾಸಗಿ ಶಾಲೆಗಳಿಗೆ ಹೆಚ್ಚು ಒತ್ತು ನೀಡಿದ್ದೆವು. ಆದರೆ, ಇಂಥ ಶಾಲೆಗಳ ಸಂಖ್ಯೆ 5 ಸಾವಿರ ದಾಟಿದ್ದು, ಸರ್ಕಾರಕ್ಕೆ ಹೊರೆ ಹೆಚ್ಚಾಗಿದೆ. ನಾವೇ ಹಣ ನೀಡಿ ಖಾಸಗಿ ಶಾಲೆಗಳ ಬಲವರ್ಧನೆ ಮಾಡುವಂತಾಗಿದೆ. 

ಇದರಿಂದ ಸರ್ಕಾರಿ, ಅನುದಾನಿತ ಶಾಲೆಗಳು ಸಮಸ್ಯೆ ಎದುರಿಸುತ್ತಿವೆ’ ಎಂದರು. “ಸರ್ಕಾರಿ ಶಾಲೆಗಳ ಸಬಲೀಕರಣದ ಉದ್ದೇಶದಿಂದ ಆರ್‌ಟಿಇ ಕಾಯ್ದೆ ತಿದ್ದುಪಡಿಗೆ ಚಿಂತನೆ ನಡೆಸಲಾಗುತ್ತಿದೆ. ಆರ್‌ಟಿಇ ಅಡಿ ಖಾಸಗಿ ಶಾಲೆಗಳಿಗೆ ಪ್ರವೇಶಾತಿ ಪಡೆದ ಮಕ್ಕಳಿಂದ ಹೆಚ್ಚುವರಿ ಶುಲ್ಕ ಪಡೆಯುವುದು, ಮಕ್ಕಳಲ್ಲಿ ತಾರತಮ್ಯ ಮಾಡುವಂಥ ಸಂಗತಿಗಳು ಗಮನಕ್ಕೆ ಬಂದಿವೆ. ಕೆಲವೆಡೆ ಆರ್‌ಟಿಇ ಸೀಟು ಹೆಚ್ಚಿಸಬೇಕೆಂಬ ಒತ್ತಾಯ ಬಂದರೆ, ಕೆಲವೆಡೆ ಈ ಪದ್ಧತಿ ನಿಷೇ ಧಿಸುವಂತೆ ಒತ್ತಾಯ ಕೇಳಿ ಬಂದಿದೆ. ಈ ನಿಟ್ಟಿನಲ್ಲಿ ಮರುಚಿಂತನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು’ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next