Advertisement

ಸದನದಿಂದ ದೂರ ಉಳಿಯಲು ಚಿಂತನೆ

06:55 AM May 21, 2018 | Team Udayavani |

ಬೆಂಗಳೂರು: ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಕೂಟದ ಸರ್ಕಾರದ ನಿಯೋಜಿತ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಬಹುಮತ ಸಾಬೀತುಪಡಿಸುವ ದಿನ ಸದನದಿಂದ ದೂರ ಉಳಿಯುವ ಬಗ್ಗೆ ಬಿಜೆಪಿ ಗಂಭೀರ ಚಿಂತನೆ ನಡೆಸಿದೆ. 

Advertisement

ಬಿಜೆಪಿಗೆ 104 ಸ್ಥಾನ ಬಂದು ಸರ್ಕಾರ ರಚನೆಗೆ ಪ್ರಯತ್ನಿಸಿದರೂ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮೈತ್ರಿಕೂಟ ರಚನೆ ಮಾಡಿಕೊಂಡು ಅಧಿಕಾರದಿಂದ ದೂರ ಇಟ್ಟಿದ್ದನ್ನು ವಿರೋಧಿಸಲು ಅಂದು ಸದನಕ್ಕೆ ಗೈರು ಹಾಜರಾಗುವ ಮೂಲಕ ಪ್ರತಿಭಟಿಸಲು ನಿರ್ಧರಿಸಲಾಗಿದೆ ಎಂದು ಹೇಳಲಾಗಿದೆ.

ಬುಧವಾರ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಅಂದು ಆ ಕುರಿತು ತೀರ್ಮಾನಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಬಿಜೆಪಿ ಸದಸ್ಯರು ಗೈರು ಹಾಜರಾಗುವುದರಿಂದ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಕೂಟಕ್ಕೆ ಬಹುಮತ ಸಾಬೀತಿಗೆ
ಯಾವುದೇ ತೊಂದರೆಯಾಗದು. 117 ಸಂಖ್ಯಾಬಲ ಇರುವುದರಿಂದ ಸಾಬೀತುಪಡಿಸಬಹುದು. ಆದರೆ,
ಸಾಂಕೇತಿಕವಾಗಿ ಪ್ರತಿಭಟಿಸಲು ಬಿಜೆಪಿ ಸದನದಿಂದ ದೂರ ಉಳಿಯುವ ಬಗ್ಗೆ ಚಿಂತನೆ ನಡೆಸಿದೆ ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next