Advertisement

Thirthahalli: ಬೈಕ್‌- ಲಾರಿ ಅಪಘಾತ; ಸವಾರನಿಗೆ ಗಂಭೀರ ಗಾಯ

09:49 AM Oct 19, 2024 | Kavyashree |

ತೀರ್ಥಹಳ್ಳಿ: ಬೆಳ್ಳಂ ಬೆಳಗ್ಗೆ ಬೈಕ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರನಿಗೆ ಗಂಭೀರ ಗಾಯವಾಗಿರುವ ಘಟನೆ ಅರೆಕಲ್ ಬಳಿ ಅ.19ರ ಶನಿವಾರ ನಡೆದಿದೆ.

Advertisement

ತಾಲೂಕಿನ ಮೇಗರವಳ್ಳಿ ಸಮೀಪದ ಅರೆಕಲ್ ಬಳಿ ಈ ಅವಘಡ ಸಂಭವಿಸಿದ್ದು ಹಾಲಾಡಿ ಶಿವರಾಮ್ (45) ಗಂಭೀರ ಗಾಯಗೊಂಡ ವ್ಯಕ್ತಿ.

ಬೈಕ್ ನಲ್ಲಿ ಬರುತ್ತಿದ್ದ ಶಿವರಾಮ್ ಅವರಿಗೆ ಲಾರಿ ಗುದ್ದಿದೆ. ಈ ಪರಿಣಾಮ ಅವರಿಗೆ ಗಂಭೀರ ಗಾಯವಾಗಿದ್ದು ಅವರನ್ನು ತೀರ್ಥಹಳ್ಳಿಯ ಆಸ್ಪತ್ರೆಗೆ ರವಾನಿಸಲಾಗಿದೆ.

ಆಗುಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next