Advertisement

Thirthahalli: ನೇಣು ಬಿಗಿದ ಸ್ಥಿತಿಯಲ್ಲಿ 9ನೇ ತರಗತಿ ವಿದ್ಯಾರ್ಥಿನಿಯ ಶವ ಪತ್ತೆ

12:29 PM Jan 30, 2024 | Team Udayavani |

ತೀರ್ಥಹಳ್ಳಿ: 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳ ಶವ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಸೋಮವಾರ ಬಸವಾನಿ ಸಮೀಪದ ಕಾಡೊಂದರಲ್ಲಿ ಪತ್ತೆಯಾಗಿದೆ.

Advertisement

ತಾಲೂಕಿನ ಬಸವಾನಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಶುಂಠಿಕಟ್ಟೆ ಪ್ರೌಢ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ ಪ್ರೀತಿ ಎಂಬಾಕೆ ಶಾಲೆಗೆ ಕಳೆದ 15 ದಿನಗಳಿಂದ ಹೋಗಿರಲಿಲ್ಲ. ಶಾಲೆಗೆ ಬರುವಂತೆ ತಿಳಿಸಲಾಗಿತ್ತು. ಮನೆಯಲ್ಲಿ ಕಾರಣ ಕೇಳಿದ್ದಕ್ಕೆ ಸೋಮವಾರ ಬಸವಾನಿ ಬಳಿಯ ಪ್ಲಾಂಟೇಷನ್ ನಲ್ಲಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ: Invitation: ಉಡುಗೊರೆ ಬೇಡ ಮೋದಿಗೆ ಮತ ನೀಡಿ… ಮದುವೆ ಆಮಂತ್ರಣದಲ್ಲೊಂದು ಚುನಾವಣೆ ಪ್ರಚಾರ

Advertisement

Udayavani is now on Telegram. Click here to join our channel and stay updated with the latest news.

Next