Advertisement

Thirthahalli; ದೇವಸ್ಥಾನ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡ ಕಿಮ್ಮನೆ ರತ್ನಾಕರ್

12:38 PM Jan 20, 2024 | keerthan |

ಶಿವಮೊಗ್ಗ: ಅಯೋಧ್ಯೆ ರಾಮನ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ತೀರ್ಥಹಳ್ಳಿಯ ಮಾಜಿ ಕಾಂಗ್ರೆಸ್ ಸಚಿವ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ಕೋದಂಡರಾಮನ ದೇವಸ್ಥಾನ ಸ್ವಚ್ಛತೆ ಕಾರ್ಯ ನಡೆಸಲಾಯಿತು.

Advertisement

ತೀರ್ಥಹಳ್ಳಿಯ ರಥಬೀದಿಯಲ್ಲಿರುವ ಕೋದಂಡರಾಮನ ದೇವಸ್ಥಾನದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ವಿಶೇಷ ಪೂಜೆ ನಡೆಸಲಾಗುತ್ತಿದೆ. ಈ ಕಾರಣದಿಂದ ಶನಿವಾರ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ದೇವಸ್ಥಾನದ ಸ್ವಚ್ಛತಾ ಕಾರ್ಯ ನಡೆಸಲಾಯಿತು.

ಕಾಂಗ್ರೆಸ್ ಮುಖಂಡರು ದೇವಸ್ಥಾನದ ಸುತ್ತ ಮುತ್ತ ಇದ್ದಂತಹ ಕಸಗಳನ್ನು ಸ್ವಚ್ಛಗೊಳಿಸಿದರು. ಸುಣ್ಣ ಬಣ್ಣ ಬಳಿದು ದೇವಸ್ಥಾನನವನ್ನು ಹೊಸ ರೂಪಕ್ಕೆ ತರಲು ಕ್ರಮಕೈಗೊಂಡಿದ್ದಾರೆ.

ಜ.22ರಂದು ಮಧ್ಯಾಹ್ನ 12 ಗಂಟೆಗೆ ಶ್ರೀಕೋದಂಡ ಸ್ವಾಮಿಗೆ ಮಹಾಮಂಗಳಾರತಿ ಕಾರ್ಯಕ್ರಮ ಜರುಗಲಿದೆ. ಈ ಪೂಜೆಗೆ ಪ್ರತಿಯೊಬ್ಬರು ಭಾಗವಹಿಸಿ ಎಂದು ಕಿಮ್ಮನೆ ರತ್ನಾಕರ್ ಮನವಿ ಮಾಡಿದ್ದಾರೆ.

ಸ್ವಚ್ಚತಾ ಕಾರ್ಯದಲ್ಲಿ ಪ. ಪಂ ಅಧ್ಯಕ್ಷೆ ಗೀತಾ ರಮೇಶ್, ವೈ ನಾಗೇಂದ್ರ, ರತ್ನಾಕರ್ ಶೆಟ್ಟಿ, ಬಿ. ಗಣಪತಿ, ಅಮರನಾಥ್ ಶೆಟ್ಟಿ, ಸತೀಶ್ ಶೆಟ್ಟಿ ಸೇರಿ ಹಲವರು ಭಾಗಿಯಾದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next