Advertisement

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

11:06 AM Oct 18, 2024 | keerthan |

ಶಿವಮೊಗ್ಗ: ಕಾಲೇಜಿಗೆ ಹೋಗಲು ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದ ವಿದ್ಯಾರ್ಥಿ ಮೇಲೆ ಬಸ್ ಹರಿದ ಪರಿಣಾಮ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ತೀರ್ಥಹಳ್ಳಿ ತಾಲ್ಲೂಕಿನ ಬೆಜ್ಜವಳ್ಳಿ ಬಸ್ ನಿಲ್ದಾಣದಲ್ಲಿ ಶುಕ್ರವಾರ (ಅ.18) ನಡೆದಿದೆ.

Advertisement

ಪ್ರಥಮ್ ಸಾವನ್ನಪ್ಪಿದ ವಿದ್ಯಾರ್ಥಿ. ಆಸ್ಪತ್ರೆ ದಾಖಲಿಸುವ ವೇಳೆ ಮಾರ್ಗ ಮಧ್ಯದಲ್ಲಿ ಪ್ರಥಮ್‌ ಕೊನೆಯುಸಿರೆಳೆದಿದ್ದಾನೆ.

ಗೋವಾ- ಮಂಗಳೂರು ಪ್ರವಾಸ ಮುಗಿಸಿಕೊಂಡು ಸಕ್ರೆಬೈಲಿಗೆ ಬರುತ್ತಿದ್ದ ಪ್ರವಾಸಿಗರಿದ್ದ ಬಸ್ ಚಾಲಕ ಓವರ್ ಟೇಕ್ ಮಾಡುವಾಗ ನಿಂತಿದ್ದ ವಿದ್ಯಾರ್ಥಿ ಪ್ರಥಮ್ ಮೇಲೆ ಹರಿದಿದೆ.

ತನಿಕಲ್ ಗ್ರಾಮದ ಪಾಂಡ್ಯ ಗ್ರಾಮದ ವಿದ್ಯಾರ್ಥಿ ಪ್ರಥಮ್‌ ತೀರ್ಥಹಳ್ಳಿಯಲ್ಲಿ ಪ್ರಥಮ ವರ್ಷ ಡಿಪ್ಲೊಮಾ ಓದುತ್ತಿದ್ದ.

ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next