Advertisement

Thirthahalli:ಜಮೀನಿನ ವಿಚಾರದಲ್ಲಿ ಗಲಾಟೆ; ವ್ಯಕ್ತಿ ಮೇಲೆ ಕತ್ತಿಯಿಂದ ಹಲ್ಲೆ

07:25 PM Aug 17, 2023 | Team Udayavani |

ತೀರ್ಥಹಳ್ಳಿ : ಜಮೀನಿನ ವಿಚಾರದಲ್ಲಿ ಗಲಾಟೆಯಾಗಿದ್ದು, ವ್ಯಕ್ತಿ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ತಾಲೂಕಿನ ಹೊನ್ನೇತಾಳು ಗ್ರಾಮಪಂಚಾಯಿತಿ ವ್ಯಾಪ್ತಿಯ ಹೊಸಕೊಪ್ಪ ಗ್ರಾಮದಲ್ಲಿ ನಡೆದಿದೆ.

Advertisement

ಅರುಣ್ (37) ಹಲ್ಲೆಗೊಳಗಾಗಿ ಗಾಯಗೊಂಡ ವ್ಯಕ್ತಿಯಾಗಿದ್ದಾನೆ.‌ ಶ್ರೀಕಂಠ ( 55 ) ಹಲ್ಲೆ ನಡೆಸಿದ ಆರೋಪಿಯಾಗಿದ್ದಾನೆ.‌ ಗಾಯಾಳು ಅರುಣ್ ತೀರ್ಥಹಳ್ಳಿ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು, ಘಟನೆ ಕುರಿತು ಆಗುಂಬೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next