Advertisement
ಧಾರವಾಡ ಕರ್ನಾಟಕ ವಿವಿ ಸಹಾಯಕ ಪ್ರಾಧ್ಯಾಪಕ ಡಾ| ವೆಂಕಟಗಿರಿ ದಳವಾಯಿ, ಗಿರಡ್ಡಿ ಕುರಿತು ಅಭಿನಂದನಾ ಭಾಷಣ ಮಾಡಲಿದ್ದಾರೆ. ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ| ಡಿ.ಎಸ್. ಮಂಜುನಾಥ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ಡಾ| ದ. ರಾ. ಬೇಂದ್ರೆ ಪ್ರಶಸ್ತಿ ಪುರಸ್ಕೃತರಾದ ಕೆ. ವಿ. ತಿರುಮಲೇಶ್ ಅವರಿಗೆ ಏ. 14ರಂದು ಹೈದರಾಬಾದ್ನ ಇಂಗ್ಲಿಷ್ ಮತ್ತು ವಿದೇಶಿ ಭಾಷೆಗಳ ವಿಶ್ವವಿದ್ಯಾಲಯದ ಸಮ್ಮೇಳನ ಸಭಾಂಗಣದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರದಾನ ಮಾಡಲಾಗುವುದು ಎಂದು ಕರ್ನಾಟಕ ಸಂಘದ ಗೌರವ ಕಾರ್ಯದರ್ಶಿ ಡಾ| ಎಚ್. ಎಸ್. ನಾಗಭೂಷಣ ತಿಳಿಸಿದ್ದಾರೆ.