Advertisement
ಜನತೆಗೆ ದ್ರೋಹ:ಈ ವೇಳೆ ಮಾತನಾಡಿದ ಬಿಜೆಪಿ ತಾಲೂಕು ಅಧ್ಯಕ್ಷ ಆಂಜನೇಯರೆಡ್ಡಿ, ರಾಜ್ಯದಲ್ಲಿ 104 ಶಾಸಕರನ್ನು ಹೊಂದಿರುವ ಬಿಜೆಪಿ ಅಧಿಕಾರಕ್ಕೆ ಬರಬೇಕೆಂಬುದು ರಾಜ್ಯದ ಜನತೆಯ ಆಶಯವಾಗಿತ್ತು. ಆದರೆ, ಚುನಾವಣೆಯಲ್ಲಿ ಜನರಿಂದ ತಿರಸ್ಕೃತಗೊಂಡಿರುವ ಕಾಂಗ್ರೆಸ್ ಹಾಗೂ ಜೆಡಿಎಸ್ ಅಪವಿತ್ರ ಮೈತ್ರಿ ಮಾಡಿಕೊಂಡು ರಾಜ್ಯದ ಜನತೆಗೆ ದ್ರೋಹ ಬಗೆದಿವೆ. ಈ ಸಮ್ಮಿಶ್ರ ಸರ್ಕಾರ ಬಹುಕಾಲ ಉಳಿಯುವುದಿಲ್ಲ. ಮೂರರಿಂದ ಆರು ತಿಂಗಳಲ್ಲಿ ಸರ್ಕಾರ ಪತನವಾಗಿ, ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಚುನಾವಣಾ ಪೂರ್ವದಲ್ಲಿ ಸರ್ಕಾರ ರಚನೆಗೆ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದ್ದ ಕಾಂಗ್ರೆಸ್ ನಾಯಕರು, ಇದೀಗ ಜೆಡಿಎಸ್ ಜೊತೆ ಕೈಜೋಡಿಸಿ ಮಾತು ತಪ್ಪಿದ್ದಾರೆ ಎಂದು ಕಿಡಿಕಾರಿದರು.
Advertisement
ಆರು ತಿಂಗಳೊಳಗೆ ಈ ಸರ್ಕಾರ ಪತನ
12:58 PM May 24, 2018 | |
Advertisement
Udayavani is now on Telegram. Click here to join our channel and stay updated with the latest news.