Advertisement

ಇದೊಂದು ಪೂರ್ವ ನಿಯೋಜಿತ ಕೃತ್ಯ, ತನಿಖಾ ಸ್ವರೂಪ ಶೀಘ್ರ ನಿರ್ಧಾರ: ಗೃಹ‌ ಸಚಿವ ಬೊಮ್ಮಾಯಿ

12:57 PM Aug 12, 2020 | Mithun PG |

ಉಡುಪಿ: ಬೆಂಗಳೂರಿನ ಡಿ.ಜಿ.ಹಳ್ಳಿ ಮತ್ತು ಕೆ.ಜಿ.ಹಳ್ಳಿಯಲ್ಲಿ ಮಂಗಳವಾರ ನಡೆದ‌‌ ಗೂಂಡಾಗಿರಿಗೆ ಸಂಬಂಧಿಸಿದಂತೆ 110 ಜನರನ್ನು ಬಂಧಿಸಲಾಗಿದೆ ಎಂದು ರಾಜ್ಯ ಗೃಹ‌ ಸಚಿವ ಬಸವರಾಜ ಬೊಮ್ಮಾಯಿ‌ ಹೇಳಿದ್ದಾರೆ.

Advertisement

ಬುಧವಾರ ಮಣಿಪಾಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದ್ದು ಮೂರು ಮಂದಿ ಗೋಲಿಬಾರಿಗೆ ಸಾವನ್ನಪ್ಪಿದ್ದಾರೆ. ಪ್ರಕರಣದ ತನಿಖೆ ಸ್ವರೂಪವನ್ನು ಸಿಎಂ, ಹಿರಿಯ ಅಧಿಕಾರಿಗಳ ಜತೆ ಚರ್ಚಿಸಿ ನಿರ್ಧರಿಸಲಾಗುವುದು ಎಂದರು.

ಘಟನೆ ನಡೆದ ಮೂರು ಗಂಟೆಗಳಲ್ಲಿ ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದ್ದು, ಪೊಲೀಸರ ನೈತಿಕ‌ ಸ್ಥೈರ್ಯ ಕೆಡಿಸಬೇಡಿ. ಪೊಲೀಸರ ಸಮಯೋಚಿತ ನಿರ್ಧಾರದಿಂದ ಪುಂಡರ ನಿಗ್ರಹ, ಪರಿಸ್ಥಿತಿ ಹತೋಟಿಗೆ ತೆಗೆದುಕೊಳ್ಳಲು ಸಾಧ್ಯವಾಯಿತು. ಮುಂಜಾಗೃತ ಕ್ರಮವಾಗಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.

ಕೇಂದ್ರ ಗೃಹ ಕಾರ್ಯದರ್ಶಿ ಜೊತೆ ಮಾತುಕತೆ ನಡೆಸಿದ್ದು ಹೈದರಾಬಾದ್, ಚೆನ್ನೈನಿಂದ ತಲಾ ಮೂರು ಸಿಆರ್ ಪಿಎಫ್ ರವಾನೆಯಾಗಲಿದೆ. ಶಾಂತಿ ಸುವ್ಯವಸ್ಥೆಗೆ ಮೊದಲ ಆದ್ಯತೆ ನೀಡಿದ್ದು ತ್ವರಿತ ಕಾರ್ಯ ಪಡೆ, ಗರುಡ ನಿಯೋಜಿಸಲಾಗಿದೆ. ಸಿಸಿಟಿವಿ ಸಹಿತ‌ ದಾಖಲೆಗಳ‌ ಆಧಾರದಲ್ಲಿ‌ ಇನ್ನಷ್ಟು ಬಂಧನ ನಡೆಯಬೇಕಿದ್ದು ಪ್ರಕರಣ ಹಿಂದೆ ಯಾರಿದ್ದಾರೆ ಎನ್ನುವುದನ್ನು ಪತ್ತೆ ಹಚ್ಚಲಾಗುತ್ತಿದೆ. ಇದೊಂದು ಪೂರ್ವ ನಿಯೋಜಿತ ಕೃತ್ಯ. ಫೇಸ್ ಬುಕ್ ಪೋಸ್ಟ್, ಚರ್ಚೆ, ಹಿಂಸಾಚಾರಕ್ಕೆ ಕರೆ ನೀಡಿದ್ದು ಸಮಾಜ ಘಾತುಕ‌ ಶಕ್ತಿಗಳ ಷಡ್ಯಂತ್ರ, ಕುಮ್ಮಕ್ಕು ಕಂಡುಬಂದಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next