Advertisement

By-election: ಚನ್ನಪಟ್ಟಣಕ್ಕೆ ಇದು 3ನೇ ಉಪಚುನಾವಣೆ

08:24 PM Oct 15, 2024 | Team Udayavani |

ರಾಮನಗರ: ಸದಾಸುದ್ದಿಯಲ್ಲಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಇದೀಗ ಮೂರನೇ ಬಾರಿಗೆ ಉಪಚುನಾವಣೆ ಎದುರಿಸುತ್ತಿದೆ.

Advertisement

ಚನ್ನಪಟ್ಟಣದ ಶಾಸಕರಾಗಿದ್ದ ಎಚ್‌.ಡಿ.ಕುಮಾರಸ್ವಾಮಿ ಮಂಡ್ಯ ಲೋಕಸಭಾ ಸದಸ್ಯರಾದ ಹಿನ್ನೆಲೆಯಲ್ಲಿ ಶಾಸಕಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಕ್ಷೇತ್ರಕ್ಕೆ ಉಪಚುನಾವಣೆ ಎದುರಾಗಿದೆ. ಇದಕ್ಕೂ ಮೊದಲು 2009 ಮತ್ತು 2011ರಲ್ಲಿ ಉಪಚುನಾವಣೆ ನಡೆದಿತ್ತು.

ಕಾಂಗ್ರೆಸ್‌ನಿಂದ ಶಾಸಕರಾಗಿ ಗೆಲುವು ಸಾಧಿಸಿದ್ದ ಸಿ.ಪಿ.ಯೋಗೇಶ್ವರ್‌ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಬಿಜೆಪಿಗೆ ಪಕ್ಷಾಂತರಗೊಂಡಾಗ 2009ರಲ್ಲಿ ಉಪಚುನಾವಣೆ ನಡೆದಿತ್ತು.

2009ರಲ್ಲಿ ಗೆಲುವು ಸಾಧಿಸಿದ್ಧ ಜೆಡಿಎಸ್‌ ಶಾಸಕ ಎಂ.ಸಿ.ಅಶ್ವತ್ಥ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿದ ಹಿನ್ನೆಲೆಯಲ್ಲಿ 2011ರಲ್ಲಿ ಮತ್ತೂಮ್ಮೆ ಚುನಾವಣೆ ಎದುರಾಗಿತ್ತು. ಇದೀಗ 3ನೇ ಬಾರಿಗೆ ಚುನಾವಣೆ ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next