Advertisement

ಇದು ಕೊನೆಯ ಚುನಾವಣೆ: ರಮಾನಾಥ ರೈ

05:00 PM Mar 01, 2023 | Team Udayavani |

ಬಂಟ್ವಾಳ: ನಾನು ಚುನಾವಣೆಗೆ ನಿಲ್ಲುವುದಕ್ಕಾಗಿ ಎಲ್ಲಿಂದಲೋ ಬಂಟ್ವಾಳಕ್ಕೆ ಬಾರದೆ ಇಲ್ಲಿಂದಲೇ ರಾಜಕೀಯವನ್ನು ಆರಂಭಿಸಿದ್ದೇನೆ. ಕಾಂಗ್ರೆಸ್‌ ನೀಡಿದ ಎಲ್ಲ ಅವಕಾಶಗಳನ್ನು ಬಳಸಿ ಜನಸೇವೆ ಮಾಡಿದ್ದೇನೆ. ಈವರೆಗೆ 8 ಬಾರಿ ಬಂಟ್ವಾಳದಲ್ಲಿ ಸ್ಪರ್ಧೆ ಮಾಡಲು ಅವಕಾಶ ಪಡೆದು ಶಾಸಕನಾಗಿ, ಸಚಿವನಾಗಿ ಅಭಿವೃದ್ಧಿಗೆ ಶ್ರಮಿಸಿದ್ದೇನೆ. ಮುಂದಿನದು 9ನೇ ಚುನಾವಣೆಯಾಗಿದ್ದು, ಕೊನೆಯ ಬಾರಿಗೆ ಸ್ಪರ್ಧೆ ಮಾಡುತ್ತೇನೆ. ತಾನು ಹೇಳಿದ್ದನ್ನು ಮಾಡಿದ್ದು, ಮಾಡಿದ್ದನ್ನೇ ಹೇಳಿದ್ದೇನೆ.

Advertisement

ಯಾರೋ ಮಾಡಿರುವುದನ್ನು ತನ್ನದೆಂದು ಹೇಳುವ ಜಾಯಮಾನ ನನ್ನದಲ್ಲ. ಜನರು ಅವಕಾಶ ನೀಡಿದರೆ ಅದ್ಭುತವಾಗಿ ಕೆಲಸ ಮಾಡಿ ತೋರಿಸಲಿದ್ದೇನೆ ಎಂದು ಮಾಜಿ ಸಚಿವ ರಮಾನಾಥ ರೈ ಅವರು ಬಂಟ್ವಾಳ ಕಾಂಗ್ರೆಸ್‌ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಮಾ. 10ರಿಂದ ಕ್ಷೇತ್ರಾದಾದ್ಯಂತ ಕಾಂಗ್ರೆಸ್‌ ರಥ ಯಾತ್ರೆಯನ್ನು ನಡೆಸಲು ತೀರ್ಮಾನಿಸಿದ್ದೇವೆ ಎಂದು ಅವರು ಮಾಹಿತಿ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next