Advertisement

ಡಿಕೆಶಿ ಪರ ಒಕ್ಕಲಿಗರ ಪ್ರತಿಭಟನೆ ಕಾಂಗ್ರೆಸ್ ಗೆ ಸೀಮಿತ: ಸಂಸದ ಬಿ.ಎನ್.ಬಚ್ಚೇಗೌಡ

01:55 PM Sep 11, 2019 | Suhan S |

ಚಿಕ್ಕಬಳ್ಳಾಪುರ:  ಇ.ಡಿ. ಬಂಧನದಲ್ಲಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಪರ ಒಕ್ಕಲಿಗರು ನಡೆಸುತ್ತಿರುವ ಪ್ರತಿಭಟನೆ ಕೇವಲ ಕಾಂಗ್ರೆಸ್ ಗೆ ಸೀಮಿತ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಬಿ.ಎನ್.ಬಚ್ಚೇಗೌಡ ತಿಳಿಸಿದರು.

Advertisement

ಜಿಲ್ಲಾಡಳಿತ ಭವನದಲ್ಲಿ ಬುಧವಾರ ತಮ್ಮ ನೂತನ ಕಚೇರಿ ಉದ್ಹಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಒಕ್ಕಲಿಗರ ಪ್ರತಿಭಟನೆ ಕಾಂಗ್ರೆಸ್  ಪಕ್ಷಕ್ಕೆ ಸೀಮಿತವಾಗಿರುವ ಪ್ರತಿಭಟನೆ, ಅದಕ್ಕೂ ಬಿಜೆಪಿ ಪಕ್ಷಕ್ಕೂ  ಸಂಬಂಧವಿಲ್ಲ ಎಂದರು. ದೇಶದಲ್ಲಿ ಅಥವಾ ರಾಜ್ಯದಲ್ಲಿ ಎಲ್ಲರೂ ಬೇಕಾದರೆ ರಾಜಕಾರಣ ಮಾಡಬೇಕು‌. ಅದು ಬಿಟ್ಟು ಒಕ್ಕಲಿಗರಿಗೆ ಮಾತ್ರ ಸೀಮಿತಗೊಳಿಸಿದರೆ ಯಾವ ಸಂದೇಶ ರವಾನೆಯಾಗುತ್ತದೆ. ಹಾಗಾದರೆ ಉಳಿದವರು ಬೇಡವೆ? ಜಾತಿ, ಸಮುದಾಯ ತಂದು ರಾಜಕೀಯ ಮಾಡುವುದು ಎಷ್ಟು ಸರಿ? ಎಂದು ಡಿಕೆಶಿ ಪರ ಒಕ್ಕಲಿಗ ರನ್ನು ಬಳಸಿಕೊಂಡು ಪ್ರತಿಭಟನೆ ಮಾಡುತ್ತಿರುವ ಕಾಂಗ್ರೆಸ್ ನಾಯಕರ ವಿರುಧ್ಧ ಬಚ್ಚೇಗೌಡ ಕಿಡಿಕಾರಿದರು.

ದೇಶದ ರಾಜಕಾರಣ ದ್ವೇಷದ ರಾಜಕಾರಣವಾಗಬಾರದು. ಇಡಿ, ಐಟಿ, ಸಿಬಿಐ ಸ್ವಾಯತ್ತ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿವೆ. ತನಿಖೆ ಮುಗಿದ ಬಳಿಕ ನಾವು ಮಾತನಾಡುತ್ತೇವೆ. ಕೇಂದ್ರದ ಬಿಜೆಪಿ ಸರ್ಕಾರ ದ್ವೇಷದ ರಾಜಕಾರಣ ಮಾಡುವುದಿಲ್ಲ. ಅವರವರು ಮಾಡಿದ್ದು ಅವರು ಅನುಭವಿಸುತ್ತಾರೆ. ಸುಮ್ಮನೆ ಎಲ್ಲದ್ದಕ್ಕೂ ರಾಜಕೀಯ ಬಣ್ಣ ಹಚ್ಚುತ್ತಾರೆ. ಡಿಕೆಶಿ ಬೆಂಬಲಿಸಿ ಒಕ್ಕಲಿಗರು ಪ್ರತಿಭಟನೆ ನಡೆಸಿರುವುದು ತಪ್ಪು. ಇಂತಹ ವಿಷಯದಲ್ಲಿ ಗೊಂದಲ ಸಮುದಾಯದ ನಡುವೆ ಮಾಡಬಾರದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next