Advertisement

JDS ಪಕ್ಷವನ್ನು ಅಲ್ಪಸಂಖ್ಯಾತರರು ನಂಬುವುದಿಲ್ಲ ಎನ್ನುವುದಕ್ಕೆ ಈ ಫಲಿತಾಂಶ ಸಾಕ್ಷಿ: ಜಮೀರ್

01:34 PM Nov 02, 2021 | Team Udayavani |

ಬೆಂಗಳೂರು: ಜೆಡಿಎಸ್ ಪಕ್ಷವನ್ನು ಅಲ್ಪಸಂಖ್ಯಾತರರು ನಂಬುವುದಿಲ್ಲ ಎಂಬುದಕ್ಕೆ ಉಪ ಚುನಾವಣೆ ಫಲಿತಾಂಶ ಸಾಕ್ಷಿ. ಎರಡೂ ಕಡೆ ಠೇವಣಿ ಕಳೆದುಕೊಂಡಿದ್ದಾರೆ. ಹಾನಗಲ್ ನಲ್ಲಿ ಪಕ್ಷೇತರ ಅಭ್ಯರ್ಥಿಗಿಂತ ಕಡಿಮೆ ಮತ ಜೆಡಿಎಸ್ ಗೆ ಬಂದಿದೆ. ಕಾಂಗ್ರೆಸ್ ನಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ಆಗಿದ್ದ ಮುಖಂಡನನ್ನು ಕರೆದುಕೊಂಡು ಹೋಗಿ ನಿಲ್ಲಿಸಿ ಆತನ ನಾಯಕತ್ವ ಹಾಳು ಮಾಡಿದರು ಎಂದು ಕಾಂಗ್ರೆಸ್ ನಾಯಕ, ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಹೇಳಿದರು.

Advertisement

ಉಪ ಚುನಾವಣೆ ಫಲಿತಾಂಶದ ಕುರಿತಾಗಿ ಮಾತನಾಡಿದ ಅವರು, ಹಾನಗಲ್ ನಲ್ಲಿ ಕಾಂಗ್ರೆಸ್ ಒಗ್ಗಟ್ಟಿನ ಹೋರಾಟ ನಡೆಸಿತ್ತು. ಸಿದ್ದರಾಮಯ್ಯ, ಡಿ. ಕೆ.ಶಿವಕುಮಾರ್ ಸೇರಿ ಎಲ್ಲ ನಾಯಕರೂ ಶ್ರಮ ಹಾಕಿದರು ಎಂದರು.

ಇದನ್ನೂ ಓದಿ:ಮತದಾರ ಬದಲಾವಣೆ ಬಯಸಿದ್ದಾನೆ, ಉಪಚುನಾವಣೆ ಫಲಿತಾಂಶವೇ ಸಾಕ್ಷಿ: ಡಿಕೆ ಶಿವಕುಮಾರ್

ಸಿಂದಗಿಯಲ್ಲಿ ಕಾಂಗ್ರೆಸ್ ಕಳೆದ ಚುನಾವಣೆಗಿಂತ 40 ಸಾವಿರ ಮತ ಹೆಚ್ಚು ಪಡೆದಿದೆ. ಜೆಡಿಎಸ್ ಅಲ್ಲೂ ಅಲ್ಪಸಂಖ್ಯಾತ ಮಹಿಳೆಯನ್ನು ಬಲಿಪಶು ಮಾಡಿದೆ. ಜೆಡಿಎಸ್ ನಂಬಿದರೆ ಕಷ್ಟ ಎನ್ನುವುದು ಅರ್ಥವಾಗಿದೆ. ಅಲ್ಪಸಂಖ್ಯಾತ ಸಮುದಾಯ ಈ ಬಗ್ಗೆ ಮನವರಿಕೆ ಮಾಡಿಕೊಳ್ಳಬೇಕು ಎಂದು ಜಮೀರ್ ಅಹಮದ್ ಹೇಳಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next