Advertisement

ಕಾಂಗ್ರೆಸ್‌ಗೆ ಈ ಭಾರಿ ಅಧಿಕಾರ ಪಕ್ಕಾ: ರಾಜೇಗೌಡ

08:50 AM May 28, 2019 | Team Udayavani |

ಶೃಂಗೇರಿ: ಪಟ್ಟಣದ ನಾಗರಿಕರು ಬಯಸುವ ವಿವಿಧ ಯೋಜನೆಯನ್ನು ಅನುಷ್ಠಾನಗೊಳಿಸಲು ಕಾಂಗ್ರೆಸ್‌ ಬದ್ಧವಾಗಿದ್ದು, ಪ್ರಬುದ್ಧ ಮತದಾರರಿಂದ ಇದು ಸಾಧ್ಯವಾಗಲಿದೆ ಎಂದು ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಹಾಗೂ ಶಾಸಕ ಟಿ.ಡಿ.ರಾಜೇಗೌಡ ತಿಳಿಸಿದರು.

Advertisement

ಪಟ್ಟಣದ ವಾರ್ಡ್‌ ನಂ.3ರಲ್ಲಿ ಸೋಮವಾರ ಅಭ್ಯರ್ಥಿ ಪರ ಮನೆ ಮನೆ ಪ್ರಚಾರ ನಡೆಸಿ ಮಾತನಾಡಿದ ಅವರು, ಕ್ಷೇತ್ರದ ಮೂರು ಪಟ್ಟಣ ಪಂಚಾಯತ್‌ನಲ್ಲಿ ಕಾಂಗ್ರೆಸ್‌ ಸಮರ್ಥ ಅಭ್ಯರ್ಥಿಗಳನ್ನು ಸ್ಪರ್ಧೆಗೆ ಇಳಿಸಿದ್ದು, ಈ ಬಾರಿ ಸಂಪೂರ್ಣ ಬಹುಮತದೊಂದಿಗೆ ಕಾಂಗ್ರೆಸ್‌ ಆಡಳಿತಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪಟ್ಟಣದಲ್ಲಿ ಕಳೆದ ಎರಡು ಅವಧಿಯಲ್ಲಿ ಅಧಿಕಾರ ನಡೆಸಿದ ಬಿಜೆಪಿ ನಿವೇಶನ ರಹಿತರಿಗೆ ಒಂದು ನಿವೇಶನ ನೀಡಿಲ್ಲ. ಇದು ಬಿಜೆಪಿಯ ಆಡಳಿತದ ವೈಫಲ್ಯವಾಗಿದೆ. ಇದರಿಂದ ಅರ್ಹ ಫಲಾನುಭವಿಗಳಿಗೆ ತೀವ್ರ ತೊಂದರೆಯಾಗಿದೆ. ಈ ಬಗ್ಗೆ ಕಾಂಗ್ರೆಸ್‌ ಗಂಭೀರವಾಗಿ ಚಿಂತನೆ ನಡೆಸಿದ್ದು, ಸುಸಜ್ಜಿತ ಬಡಾವಣೆ ನಿರ್ಮಿಸುವ ಗುರಿ ಹೊಂದಲಾಗಿದೆ.ದೇಶ, ವಿದೇಶದಿಂದ ಸಾವಿರಾರು ಪ್ರವಾಸಿಗರು ಇಲ್ಲಿಗೆ ಆಗಮಿಸುತ್ತಿದ್ದು,ನದಿಯನ್ನು ಸ್ವಚ್ಛಗೊಳಿಸಿ, ನೀರು ಕಲುಷಿತವಾಗದಂತೆ ನದಿಯ ಪಾವಿತ್ರ್ಯತತೆ ಕಾಪಾಡಲಾಗುವುದು. ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ನೀಡುವುದರೊಂದಿಗೆ ಯುವಕರಿಗೆ ಉದ್ಯೋಗ ಸೃಷ್ಟಿ ಮಾಡಲಾಗುವುದು ಎಂದು ತಿಳಿಸಿದರು.

ಪಟ್ಟಣದ ವಿವಿಧ ವಾರ್ಡ್‌ನಲ್ಲಿ ಶಾಸಕರು ಮನೆ ಮನೆ ತೆರಳಿ ಪ್ರಚಾರ ನಡೆಸಿದರು. ಪಕ್ಷದ ಅಭ್ಯರ್ಥಿಗಳಾದ ರೂಪಾ.ಎಂ.ಪೈ, ಉಮೇಶ್‌ ಪುದುವಾಳ್‌, ಮುಖಂಡರಾದ ಸರೋಜಮ್ಮ, ದಿನೇಶ್‌ ಶೆಟ್ಟಿ, ಮುರುಳಿಧರ ಪೈ ಸೇರಿದಂತೆ ಕಾರ್ಯಕರ್ತರು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next