Advertisement

ಈ ಬಾರಿ ನಾನೇ ಸಿಎಂ: ಬಿ.ಎಸ್‌.ಯಡಿಯೂರಪ್ಪ

06:35 AM Apr 20, 2018 | |

ಶಿಕಾರಿಪುರ: ಈ ಬಾರಿ ತಾವು 50 ಸಾವಿರಕ್ಕೂ ಅಧಿಕ ಮತಗಳಿಂದ ಆರಿಸಿ ಬರಲಿದ್ದು, ರಾಜ್ಯದ ಮುಖ್ಯಮಂತ್ರಿಯಾಗುವುದು ಖಚಿತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Advertisement

ನಾಮಪತ್ರ ಸಲ್ಲಿಕೆ ಬಳಿಕ ಸುದ್ದಿಗಾರರೊಂದಿಗೆ ಮಾತ ನಾಡಿದ ಯಡಿಯೂರಪ್ಪ,”ಕಾಂಗ್ರೆಸ್‌ ರಾಜ್ಯದಲ್ಲಿ ತನ್ನ ಶಕ್ತಿಯನ್ನು ಕಳೆದು ಕೊಳ್ಳುತ್ತಿದೆ. ಇದರ ಬೆನ್ನಲ್ಲೇ ಬಿಜೆಪಿ ಅತ್ಯಂತ ಬಲಿಷ್ಠವಾಗುತ್ತಿದೆ. ನಮ್ಮ ಕಾರ್ಯಕರ್ತರ ಶ್ರಮದಿಂದ ನಾನು ಐವತ್ತು ಸಾವಿರಕ್ಕೂ ಅಧಿಕ ಮತಗಳಿಂದ ಗೆದ್ದು ಬರಲಿದ್ದೇನೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

“ರಾಜ್ಯದಲ್ಲಿ ಈ ಬಾರಿ ನನ್ನ ನೇತೃತ್ವದ ಬಿಜೆಪಿ ಅಧಿಕಾರದ ಗದ್ದುಗೆ ಹಿಡಿಯುವುದು ಖಚಿತ. ಸಿದ್ದರಾಮಯ್ಯನವರ ಒಡೆದು ಆಳುವ ನೀತಿ ಮತ್ತು ವರ್ತನೆಯಿಂದ ಜನ ಬೇಸರಗೊಂಡಿದ್ದಾರೆ.

ಬಿಜೆಪಿ ಜಯದ ಕಹಳೆ ಶಿಕಾರಿಪುರದಿಂದ ಮೊಳಗಲಿದೆ.ಪಕ್ಷದಲ್ಲಿ ಯಾವುದೇ ಆಂತರಿಕ ಭಿನ್ನಮತವಿಲ್ಲ. ಆದರೆ, ಭಿನ್ನ ಮನಸ್ಸುಗಳು ಇರಬಹುದು. ಪಕ್ಷ ಒಂದು ಕುಟುಂಬವಿದ್ದಂತೆ. ನಾನು ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಅಭಿವೃದ್ಧಿಯ ಹೊಸ ಶಕೆ ಪ್ರಾರಂಭವಾಗಲಿದೆ’ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next