Advertisement

ಈ ಬಾರಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಖಚಿತ: ಪೇಜಾವರಶ್ರೀ ವಿಶ್ವಾಸ

09:39 AM Jun 06, 2019 | Nagendra Trasi |

ಬಳ್ಳಾರಿ: ಈ ಬಾರಿ ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡಿಸುತ್ತಾರೆ ಎಂದು ಪೇಜಾವರಶ್ರೀ ಬುಧವಾರ ವಿಶ್ವಾಸವ್ಯಕ್ತಪಡಿಸಿದರು.

Advertisement

ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕೇಂದ್ರದಲ್ಲಿ ಬಿಜೆಪಿ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೇರಿದೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡುವ ಬಗ್ಗೆ ಎಲ್ಲ ಮಠಾಧೀಶರು ಒತ್ತಾಯ ಮಾಡುತ್ತೇವೆ. ಅಲ್ಲದೇ ಮೋದಿಯವರು ರಾಮ ಮಂದಿರ ನಿರ್ಮಾಣ ಮಾಡುತ್ತಾರೆ ಎಂಬ ವಿಶ್ವಾಸ ಇದೆ ಎಂದರು.

ಅಯೋಧ್ಯೆಯ ರಾಮಮಂದಿರ ಪ್ರಕರಣ ಈಗಾಗಲೇ ಸುಪ್ರೀಂಕೋರ್ಟ್ ನಲ್ಲಿದೆ. ತೀರ್ಪು ಕೂಡಾ ನಮ್ಮ ಪರ ಬರಲಿದೆ ಎಂಬ ವಿಶ್ವಾಸ ಈ ಸಂದರ್ಭದಲ್ಲಿ ವ್ಯಕ್ತಪಡಿಸಿದರು.

ಏತನ್ಮಧ್ಯೆ ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕುರಿತ ಸುದ್ದಿಗಾರರು ಕೇಳಿದ ಪ್ರಶ್ನೆಗೆ, ನನಗೆ ಬ್ಯಾನರ್ಜಿ ಬಗ್ಗೆ ಗೌರವ ಇತ್ತು. ಆದರೆ ಈ ಲೋಕಸಭಾ ಚುನಾವಣೆ ವೇಳೆ ಅವರು ನಡೆದುಕೊಂಡ ರೀತಿ ಸರಿಯಲ್ಲ ಎಂದರು. ಅಲ್ಲದೇ ಬಾಂಗ್ಲಾ ಅಕ್ರಮ ವಲಸಿಗರನ್ನು ಪ್ರೋತ್ಸಾಹಿಸುವುದು ಒಳ್ಳೆಯ ಬೆಳವಣಿಗೆ ಅಲ್ಲ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next