Advertisement

ಈ ಬಾರಿ ಗಣರಾಜ್ಯೋತ್ಸವಕ್ಕೆ ಅತಿಥಿ ಇಲ್ಲ

12:07 AM Jan 15, 2021 | Team Udayavani |

ಹೊಸದಿಲ್ಲಿ: ಕೋವಿಡ್ ಸೋಂಕು ಹಿನ್ನೆಲೆಯಲ್ಲಿ ಪ್ರಸಕ್ತ ವರ್ಷದ ಗಣರಾಜ್ಯೋತ್ಸವ ಕಾರ್ಯ ಕ್ರಮದಲ್ಲಿ ಯಾವುದೇ ವಿದೇಶಿ ಗಣ್ಯರು ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವುದಿಲ್ಲ ಎಂದು ವಿದೇಶಾಂಗ ಸಚಿವಾಲಯ ಗುರುವಾರ ಸ್ಪಷ್ಟಪಡಿಸಿದೆ.

Advertisement

ಸುಮಾರು 50 ವರ್ಷಗಳಲ್ಲೇ ಇದೇ ಮೊದಲಿಗೆ ಮುಖ್ಯ ಅತಿಥಿಯಿಲ್ಲದ ಗಣರಾಜ್ಯೋತ್ಸವ ಪರೇಡ್‌ಗೆ ಭಾರತ ಸಾಕ್ಷಿಯಾಗಲಿದೆ. ಬ್ರಿಟನ್‌ ಪ್ರಧಾನಿ ಬೋರಿಸ್‌ಜಾನ್ಸನ್‌ಗೆ ಭಾರತ ಸರಕಾರ ಆಹ್ವಾನ ನೀಡಿತ್ತು. ಆಹ್ವಾನವನ್ನು ಅವರು ಸ್ವೀಕರಿಸಿದ್ದರಾದರೂ ಅನಂತರ ಕೋವಿಡ್ ಹೊಸ ರೂಪಾಂತರ ಹಿನ್ನೆಲೆಯಲ್ಲಿ ತಮ್ಮ ಭಾರತ ಪ್ರವಾಸವನ್ನು ಅವರು ರದ್ದುಗೊಳಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next