Advertisement

ತೊಕ್ಕೊಟ್ಟು ಜಂಕ್ಷನ್ ಬಳಿ ಪೊಲೀಸ್ ಜೀಪಿಗೆ ಕಲ್ಲೆಸೆತ, ಆರೋಪಿ ಪೋಲೀಸರ ವಶಕ್ಕೆ

12:05 AM Apr 11, 2021 | Team Udayavani |

ಉಳ್ಳಾಲ: ತೊಕ್ಕೊಟ್ಟು ಜಂಕ್ಷನ್ ಬಳಿ ಪೊಲೀಸ್ ಜೀಪ್ ಗೆ ಕಲ್ಲೆಸೆದ ಘಟನೆ ನಡೆದಿದ್ದು, ಪೊಲೀಸರೊಂದಿಗೆ ಸ್ತಳೀಯರು ಸೇರಿ ಆರೋಪಿಯೊಬ್ಬನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Advertisement

ಕೋಡಿ ನಿವಾಸಿ ಮಹಮ್ಮದ್ ಹಫೀಝ್ ಎಂಬಾತನೇ ಪೊಲೀಸರ ವಶದಲ್ಲಿರುವ ಆರೋಪಿಯಾಗಿದ್ದು, ಜಂಕ್ಷನ್ ಬಳಿ ಕೊರಗಜ್ಜನ ಕೋಲ ನಡೆಯುತ್ತಿದ್ದು ಅಲ್ಲೇ ಇರುವ ವಾಣಿಜ್ಯ ಸಂಕೀರ್ಣ ದ ಮೇಲಿನಿಂದ ಕಲ್ಲೆಸೆದಿದ್ದು ಈ ಸಂದರ್ಭದಲ್ಲಿ‌ಪೊಲೀಸರು ಮತ್ತು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜನರು ಆರೋಪಿಯನ್ಬು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಉಳ್ಳಾಲ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಥಳದಲ್ಲಿ ನಡೆಯುತ್ತಿದ್ದ ಕೊರಗಜ್ಜನ ಕೋಲ ಸ್ಥಳದ ಸಮೀಪದಲ್ಲೇ ಕೃತ್ಯ ನಡೆದಿರುವುದು ಕೋಮು ಸಾಮರಸ್ಯ ಕದಡಲು ಯತ್ನಿಸಿದ ಎನ್ನಲಾಗಿದ್ದು, ಭಕ್ತಾಧಿಗಳು ಸಂಯಮದಿಂದ ವರ್ತಿಸಿದ್ದರಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ.

ಇದನ್ನೂ ಓದಿ :ಧವನ್‌ – ಪೃಥ್ವಿ ಶಾ ಪ್ರಚಂಡ ಬ್ಯಾಟಿಂಗ್ ಪರಾಕ್ರಮ ‌; ಡೆಲ್ಲಿ ಜಯಭೇರಿ

Advertisement
Advertisement

Udayavani is now on Telegram. Click here to join our channel and stay updated with the latest news.

Next