Advertisement

ಅರ್ಕಾವತಿ ಹಗರಣದಲ್ಲಿದ್ದವರು ಜೈಲಿಗೆ ಹೋಗುತ್ತಾರೆ: ನಳಿನ್ ಕುಮಾರ್ ಕಟೀಲ್

02:49 PM Feb 25, 2023 | Team Udayavani |

ಲಿಂಗಸೂಗುರು: ಅರ್ಕಾವತಿ ಪ್ರಕರಣದಲ್ಲಿ ಸಿದ್ದರಾಮಯ್ಯ ಜೈಲಿಗೆ ಹೋಗುತ್ತಾರೆ ಎಂದು ನಾನು ಹೇಳಿದ್ದೆ. ಜಸ್ಟೀಸ್ ಕೆಂಪಣ್ಣ ಕೊಟ್ಟ ವರದಿ ವಿಧಾನಸಭೆಯಲ್ಲಿ ಸಿಎಂ ಓದಿದ್ದಾರೆ. ಲೋಕಾಯುಕ್ತಕ್ಕೆ ಕೊಟ್ಟು ಸಂಪೂರ್ಣ ತನಿಖೆ ಮಾಡಿಸಲಾಗುತ್ತಿದೆ. ಪ್ರಕರಣದಲ್ಲಿ ಭಾಗಿಯಾದ ನಾಯಕರ ವಿರುದ್ಧ ಕ್ರಮ ಆಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದರು.

Advertisement

ಲಿಂಗಸೂಗೂರಿನಲ್ಲಿ ನಡೆದ ವಿಜಯಸಂಕಲ್ಪ ಯಾತ್ರೆಯಲ್ಲಿ ಭಾಗಿಯಾದ ವೇಳೆ ಸುದ್ದಿಗಾರರ ಜತೆ ಮಾತನಾಡಿದರು. ಸಿದ್ದರಾಮಯ್ಯ ನೇತೃತ್ವದ ಬಹುಮತ ಸರ್ಕಾರ ಇದ್ದಾಗ ಹಗರಣ ಆಗಿತ್ತು. ತಾವು ಸಿಕ್ಕಿ ಬೀಳುತ್ತೇವೆ ಎಂದು ಲೋಕಾಯುಕ್ತವನ್ನು ಮುಚ್ಚಿಸಿದ್ದರು. ಹಲ್ಲಿಲ್ಲದ ಎಸಿಬಿಯನ್ನು ಹುಟ್ಟುಹಾಕಿದರು. ಕೆಂಪಣ್ಣ ವರದಿಯನ್ನು ಮುಚ್ಚಿಡುವ ಕೆಲಸ ಸಿದ್ದರಾಮಯ್ಯ ಮಾಡಿದ್ದರು. ಈಗ ಆ ವರದಿ ದಾಖಲಾತಿಗಳನ್ನು ಇಟ್ಟುಕೊಂಡು ತನಿಖೆ ಮಾಡಿಸುತ್ತೇವೆ. ಹಗರಣದಲ್ಲಿದ್ದವರು ಜೈಲಿಗೆ ಹೋಗುತ್ತಾರೆ ಎಂದು ತಿಳಿಸಿದರು.

ಅಮಿತ್ ಶಾ ಜನಾರ್ದನ ರೆಡ್ಡಿಯನ್ನು ನೋಡಿಕೊಳ್ಳುತ್ತೇನೆ ಎಂದು ಹೇಳಿಲ್ಲ. ನೀವು ಪಕ್ಷದ ಕೆಲಸ ಮಾಡಿ, ರೆಡ್ಡಿ ಬಗ್ಗೆ ನಾವು ಯೋಚಿಸುತ್ತೇವೆ ಎಂದಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ:ರೈತರ ಕೃಷಿ ಪಂಪ್‌ಸೆಟ್‌ಗೆ ಹಗಲಿನಲ್ಲಿ ವಿದ್ಯುತ್‌ ನೀಡಲು ಮನವಿ

ಸಿ.ಟಿ ರವಿ ಮಾಂಸ ತಿಂದು ದೇವಸ್ಥಾನಕ್ಕೆ ತೆರಳಿದ ವಿಚಾರದ ಬಗ್ಗೆ ಅವರು ಈಗಾಗಲೇ ಸ್ಪಷ್ಟನೆ ಕೊಟ್ಟಿದ್ದಾರೆ. ಆದರೆ ಸಿದ್ದರಾಮಯ್ಯ ಮಾಂಸ ತಿಂದು ಧರ್ನಸ್ಥಳದ ಒಳಗೆ ಹೋಗಿದ್ದರು. ಸಿ.ಟಿ ರವಿ ದೇವಸ್ಥಾನದ ಒಳಗೆ ಹೋಗಿಲ್ಲ. ಇಬ್ಬರಿಗೂ ವ್ಯತ್ಯಾಸವಿದೆ ಎಂದು ನಳಿನ್ ಕುಮಾರ್ ಹೇಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next