Advertisement

ಸರ್ಕಾರ ಪತನದ ಕನಸು ಕಾಣುವವರಿಗೆ ನಿರಾಸೆ

06:20 AM Aug 30, 2018 | Team Udayavani |

ಹುಬ್ಬಳ್ಳಿ: ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಸರ್ಕಾರ ಬೀಳಲಿದೆ ಎನ್ನುವ ಹೇಳಿಕೆ, ಸುದ್ದಿಗಳೇ ಹೆಚ್ಚಾಗಿವೆ. ಆದರೆ, ಮೈತ್ರಿ ಸರ್ಕಾರ ಭದ್ರವಾಗಿ ಬೇರು ಬಿಟ್ಟಿದೆ. ಸರ್ಕಾರ ಬೀಳುತ್ತದೆ ಎನ್ನುವವರಿಗೆ ನಿರಾಸೆಯೇ ಕಟ್ಟಿಟ್ಟ ಬುತ್ತಿ ಎಂದು ಗ್ರಾಮೀಣಾಭಿವೃದ್ಧಿ ಕೃಷ್ಣ ಬೈರೇಗೌಡ ಲೇವಡಿ ಮಾಡಿದರು.

Advertisement

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್‌ನ ಯಾವ ಶಾಸಕರೂ ಬಿಜೆಪಿ ಸಂಪರ್ಕದಲ್ಲಿಲ್ಲ. ಇದೊಂದು
ಊಹಾಪೋಹ. ಜೆಡಿಎಸ್‌ನೊಂದಿಗೆ ಮೈತ್ರಿ ಮಾಡಿಕೊಂಡಿರುವುದರಿಂದ ಪಕ್ಷಕ್ಕೆ ಯಾವುದೇ ಪೆಟ್ಟು ಬಿದ್ದಿಲ್ಲ. ಯಾವುದೇ ಯೋಜನೆ ಮಾಡಿದರೂ ಎರಡು ಪಕ್ಷಗಳಿಗೂ ಶ್ರೇಯಸ್ಸು ದೊರೆಯುತ್ತಿದೆ. ಎಲ್ಲಾ ಇಲಾಖೆಗಳಲ್ಲೂ ಸಚಿವ ಎಚ್‌.ಡಿ.ರೇವಣ್ಣ ಅವರು ಹಸ್ತಕ್ಷೇಪ ಮಾಡುತ್ತಾರೆ ಎಂಬುದು ಸುಳ್ಳು. ಮೈತ್ರಿಯಿಂದ ಮುಂದಿನ ಲೋಕಸಭೆ ಚುನಾವಣೆಯಲ್ಲಿ ಯಾವುದೇ ದುಷ್ಪರಿಣಾಮ ಉಂಟಾಗುವುದಿಲ್ಲ. ಎರಡು ಪಕ್ಷದ ವರಿಷ್ಠರ ಅನುಮತಿ ಪ್ರಕಾರ ಮೈತ್ರಿ ಮಾಡಿಕೊಳ್ಳಲಾಗಿದೆ. ಈ ಕುರಿತು ಮರು ಪರಿಶೀಲನೆಯಿಲ್ಲ ಎಂದರು

Advertisement

Udayavani is now on Telegram. Click here to join our channel and stay updated with the latest news.

Next