Advertisement

ಉಪ್ಪು ತಿಂದವರು ನೀರು ಕುಡಿಯಲೇಬೇಕು: ಉಗ್ರಪ್ಪ

06:30 AM Nov 11, 2018 | Team Udayavani |

ಬಳ್ಳಾರಿ: ಉಪ್ಪು ತಿಂದವರು ನೀರು ಕುಡಿಯಲೇಬೇಕು. ಒಂದು ಸಮಯದಲ್ಲಿ ಬಳ್ಳಾರಿಗೆ ಬನ್ನಿ ಎಂದು ಸವಾಲು ಹಾಕಿದವರೇ ಇಂದು ಜಿಲ್ಲೆಗೆ ಬರುವಂತಿಲ್ಲ. 

Advertisement

ನ್ಯಾಯದೇವತೆಯೇ ಅವರು ಬಳ್ಳಾರಿಗೆ ಬರದಂತೆ ಆದೇಶ ನೀಡಿದ್ದಾಳೆ. ಯಾವ ಸಮಯದಲ್ಲಿ ಏನು ಮಾಡಬೇಕೋ ಅದನ್ನು ನ್ಯಾಯಾಲಯ ಮಾಡಿದೆ ಎನ್ನುವ ಮೂಲಕ ಬಳ್ಳಾರಿ ನೂತನ ಸಂಸದ ವಿ.ಎಸ್‌.ಉಗ್ರಪ್ಪ ಅವರು ಜನಾರ್ದನ ರೆಡ್ಡಿಗೆ ಟಾಂಗ್‌ ನೀಡಿದರು. 

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಸಚಿವ ಜನಾರ್ದನರೆಡ್ಡಿಯವರು ಜಾರಿ ನಿರ್ದೇಶನಾಲಯವನ್ನು (ಇಡಿ) ದುರ್ಬಳಕೆ ಮಾಡಿಕೊಳ್ಳಲು ಹೋಗಿದ್ದಾರೆ ಎಂದು ತಿಳಿದು ಬಂದಿದೆ. ಆ ಪ್ರಕರಣ ಇನ್ನೂ ತನಿಖೆ ಹಂತದಲ್ಲಿದ್ದು, ಉಪ್ಪು ತಿಂದವರು ನೀರು ಕುಡಿಯಲೇ ಬೇಕು ಎಂದರು.

ರೆಡ್ಡಿ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ ಎನ್ನುತ್ತಾರಲ್ಲ, ಜನಾರ್ದನ ರೆಡ್ಡಿಗೆ ಲೂಟಿ ಮಾಡು, ಕಳ್ಳತನ ಮಾಡು, ಹುಂಡಿ ಒಡಿ ಅಂತ ನಾವು ಹೇಳಿಕೊಟ್ಟಿದ್ವಾ?
– ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿ.

Advertisement

Udayavani is now on Telegram. Click here to join our channel and stay updated with the latest news.

Next