Advertisement
ಇದು ರಾಜ್ಯಪಾಲ ವಜುಭಾಯಿ ರೂಢಭಾಯಿ ವಾಲಾ ಅವರ ಅಭಿಪ್ರಾಯ. ಶನಿವಾರ ನಗರದ ಖಾಸಗಿ ಹೋಟೆಲ್ನಲ್ಲಿ ಹಮ್ಮಿಕೊಂಡಿದ್ದ ಕೇಂದ್ರ ಸರ್ಕಾರದ ದಕ್ಷಿಣ ವಲಯ ವಕೀಲರ 2ನೇ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಭಯೋತ್ಪಾದಕರು ಮತ್ತು ದೇಶದ್ರೋಹಿಗಳನ್ನು ಶಿಕ್ಷಿಸಲು ಕಠಿಣ ಕಾನೂನು ಅಗತ್ಯವಿದೆ ಎಂದು ಪ್ರತಿಪಾದಿಸಿದರು.
Related Articles
Advertisement
ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಮಾತನಾಡಿ, ಕಪ್ಪು ಹಣ ಭಯೋತ್ಪಾದಕರ ಕೈ ಸೇರುತ್ತಿದ್ದ ಪರಿಣಾಮ ಕಾಶ್ಮೀರದಲ್ಲಿ ಹೆಚ್ಚಿನ ಕೃತ್ಯ ನಡೆಯುತ್ತಿದ್ದವು. ಇದಕ್ಕೆ ಸಾಕ್ಷಿ ಎಂಬಂತೆ 2015-16ರಲ್ಲಿ ಕಾಶ್ಮೀರದಲ್ಲಿ 2,683 ಕಲ್ಲು ಎಸೆತ ಪ್ರಕರಣ ದಾಖಲಾಗಿತ್ತು. 2016-17ರಲ್ಲಿ ಇದು 639ಕ್ಕೆ ಇಳಿದಿದೆ. ಕೇಂದ್ರ ಸರ್ಕಾರ ಗರಿಷ್ಠ ಮೌಲ್ಯದ ನೋಟು ರದ್ದು ಮಾಡಿರುವುದರಿಂದ ಕಾಶ್ಮೀರ ಶಾಂತವಾಗಿದೆ ಎಂದರು.
ರಾಜ್ಯ ಹೈಕೋರ್ಟ್ ನ್ಯಾಯಮೂರ್ತಿಗಳಾದ ಬಿ.ಎಸ್.ಪಾಟೀಲ್, ಅರವಿಂದ್ ಕುಮಾರ್, ಕೇರಳ ಹೈಕೋರ್ಟ್ ನ್ಯಾ. ಕೆ.ಸುರೇಂದ್ರ ಮೋಹನ್, ಆಂಧ್ರ ಪ್ರದೇಶ ಹೈಕೋರ್ಟ್ನ ನ್ಯಾ. ಚೆಲ್ಲಂ ಕೋದಂಡರಾಮ್, ಮದ್ರಾಸ್ ಹೈಕೋರ್ಟ್ನ ನ್ಯಾ.ಜಿ.ಆರ್.ಸ್ವಾಮಿನಾಥನ್, ಕೇಂದ್ರ ಕಾನೂನು ಇಲಾಖೆ ಕಾರ್ಯದರ್ಶಿ ಸುರೇಶ್ ಚಂದ್ರ, ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಎಂ.ನಟರಾಜ್, ಜಿ.ರಾಜಗೋಪಾಲನ್, ಪ್ರಭುಲಿಂಗ ಕೆ.ನವಡ್ಗಿ, ಸಹಾಯಕ ಸಾಲಿಸಿಟರ್ ಜನರಲ್ ಕೃಷ್ಣ ಎಸ್.ದೀಕ್ಷಿತ್ ಮೊದಲಾದವರು ಉಪಸ್ಥಿತರಿದ್ದರು.
ನ್ಯಾಯಾಲಯದಲ್ಲಿ ಸರ್ಕಾರಿ ನೀತಿ, ನಿಯಮವನ್ನು ಸಮರ್ಥಿಸಿಕೊಳ್ಳುವ ಮಹತ್ತರ ಜವಾಬ್ದಾರಿ ಸರ್ಕಾರಿ ವಕೀಲರ ಮೇಲಿರುತ್ತದೆ. ಸರ್ಕಾರಿ ನೀತಿಗಳಲ್ಲಿ ಸಾರ್ವಜನಿಕ ಹಿತಾಸಕ್ತಿ ಅಡಗಿರುತ್ತದೆ ಎಂಬುದನ್ನು ನೆನಪಿಟ್ಟುಕೊಳ್ಳಬೇಕು. ದೇಶದ ಭವಿಷ್ಯ, ಗುರಿ ಮತ್ತು ಸಾಧನೆಯನ್ನು ಗಮನದಲ್ಲಿಟ್ಟುಕೊಂಡು ಹೊಸ ಕಾನೂನು ರೂಪಿಸಬೇಕು. ದೇಶದ ಭದ್ರತೆ ಹಾಗೂ ಸಮಗ್ರತೆ ಅತಿ ಅಗತ್ಯ.– ನ್ಯಾ.ಬಿ.ಎಸ್.ಪಾಟೀಲ್, ರಾಜ್ಯ ಹೈಕೋರ್ಟ್ ನ್ಯಾಯಮೂರ್ತಿ