Advertisement

“ಉಚ್ಚಾಟಿಸಿದ್ದರೂ ಯತ್ನಾಳ್‌ಗೆ ಬುದ್ಧಿ ಬಂದಿಲ್ಲ’

01:13 AM Dec 27, 2020 | mahesh |

ಬಂಟ್ವಾಳ: ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರ ಮಾತು, ನಡೆ ಹಾಗೂ ಬಿಜೆಪಿ ನಾಯಕರ ಕುರಿತ ಹೇಳಿಕೆಗಳು ನಮ್ಮ ಪಕ್ಷಕ್ಕೆ ಗೌರವ ತರುವಂಥದ್ದಲ್ಲ. ನಾನು ಪಕ್ಷದ ರಾಜ್ಯಾಧ್ಯಕ್ಷನಾಗಿದ್ದ ವೇಳೆಯೂ ಇದೇ ರೀತಿಯ ಹೇಳಿಕೆಗಳನ್ನು ನೀಡಿದ್ದ ಅವರನ್ನು 6 ವರ್ಷಗಳ ಅವಧಿಗೆ ಉಚ್ಚಾಟಿಸಿದ್ದೆ. ಬಳಿಕ ಸರಿ ಹೋದಾರು ಎಂದುಕೊಂಡು ಪಕ್ಷಕ್ಕೆ ಸೇರಿಸಿಕೊಳ್ಳಲಾಯಿತು. ಆದರೆ ಸರಿಯಾಗಿಲ್ಲ. ಇನ್ನು ಪಕ್ಷದ ವರಿಷ್ಠರು ನೋಡಿಕೊಳ್ಳುತ್ತಾರೆ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಹೇಳಿದರು.

Advertisement

ಅವರು ಶನಿವಾರ ಕಲ್ಲಡ್ಕದಲ್ಲಿ ಪತ್ರಕರ್ತರ ಜತೆ ಮಾತನಾಡಿ, ಯತ್ನಾಳ್‌ ಅವರ ಮಾತುಗಳ ಕುರಿತು ತೀಕ್ಷ್ಣವಾದ ಪ್ರತಿರೋಧ ವ್ಯಕ್ತವಾಗುತ್ತಿದೆ. ಅವರು ಅರ್ಥ ಮಾಡಿಕೊಂಡು ಬದಲಾಗಬೇಕಿತ್ತು. ಶಿಸ್ತುಬದ್ಧ ಪಕ್ಷದ ಶಿಸ್ತಿನ ಕಾರ್ಯಕರ್ತರಾಗಿ ಕೆಲಸ ಮಾಡುವುದು ನಮ್ಮೆಲ್ಲರ ಜವಾಬ್ದಾರಿ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next