Advertisement

ನಾವೇ ಶಸ್ತ್ರಾಸ್ತ್ರ ಹಿಡಿದು ಉಗ್ರರನ್ನು ಸೆದೆ ಬಡಿಯುತ್ತೇವೆ: ಪಾಕ್ ವಿರುದ್ಧ ಜನಾಕ್ರೋಶ

10:28 AM Oct 15, 2022 | Team Udayavani |

ಖೈಬರ್ ಪಖ್ತುಂಖ್ವಾ(ಪಾಕಿಸ್ತಾನ): ಭಯೋತ್ಪಾದನೆ ಘಟನೆಗಳಿಂದ ರೋಸಿ ಹೋಗಿರುವ ಪಾಕಿಸ್ತಾನದ ಸ್ವಾತ್ ಕಣಿವೆ ಮತ್ತು ಶಾಂಗ್ಲಾ ನಿವಾಸಿಗಳು ಸಾವಿರಾರು ಸಂಖ್ಯೆಯಲ್ಲಿ ಬೀದಿಗಿಳಿದು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಪ್ರಾಕೃತಿಕ ಸೌಂದರ್ಯದ ಕಣಿವೆ ಪ್ರದೇಶದಲ್ಲಿನ ಭಯೋತ್ಪಾದನೆ ವಿರುದ್ಧ ಪಾಕ್ ಸರ್ಕಾರ ಇನ್ನೂ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

Advertisement

ಇದನ್ನೂ ಓದಿ:ರೋಹಿತ್ ಅಭಿಮಾನಿಯನ್ನು ಹತ್ಯೆಗೈದ ವಿರಾಟ್ ಕೊಹ್ಲಿ ಫ್ಯಾನ್: ಏನಿದು ‘ಫ್ಯಾನ್ ವಾರ್’?

ಪ್ರಕೃತಿ ಸೌಂದರ್ಯದ ಈ ಪ್ರದೇಶದಲ್ಲಿ ಶಾಂತಿ ನೆಲೆಸುವ ನಿಟ್ಟಿನಲ್ಲಿ ಅಧಿಕಾರಿಗಳು ಉಗ್ರರನ್ನು ಬಗ್ಗುಬಡಿಯಬೇಕೆಂದು ಆಗ್ರಹಿಸಿರುವುದಾಗಿ ಡಾನ್ ವರದಿ ಮಾಡಿದೆ. ಸ್ಥಳೀಯ ಸಂಘಟನೆಯಾದ ಖ್ವಾಮಿ ಜಿರ್ಗಾ ಪ್ರತಿಭಟನೆಯನ್ನು ಆಯೋಜಿಸಿದ್ದು, ಚಾರ್ ಬಾಗ್ ನ ವಿವಿಧ ಪ್ರದೇಶಗಳಿಂದ ಹಿರಿಯರು, ಯುವಕರು, ಮಕ್ಕಳು ಭಾಗವಹಿಸಿದ್ದರು.

ಕಣಿವೆ ಪ್ರದೇಶದಲ್ಲಿ ಶಾಂತಿಯನ್ನು ಪುನರ್ ಸ್ಥಾಪಿಸಿ ಎಂಬ ಘೋಷಣೆ ಕೂಗಿ ಪ್ರತಿಭಟನೆ ನಡೆಸಿರುವುದಾಗಿ ವರದಿ ವಿವರಿಸಿದೆ. ಸೋಮವಾರ ಉಗ್ರರು ಶಾಲಾ ವಾಹನವನ್ನು ಗುರಿಯಾಗಿರಿಸಿಕೊಂಡು ಗುಂಡಿನ ದಾಳಿ ನಡೆಸಿದ್ದ ಪರಿಣಾಮ ಚಾಲಕ ಸಾವನ್ನಪ್ಪಿದ್ದು, ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ನಡೆದಿತ್ತು.

Advertisement

ಒಂದು ವೇಳೆ ಉಗ್ರರನ್ನು ಮಟ್ಟ ಹಾಕಲು ಅಧಿಕಾರಿಗಳು ವಿಫಲರಾದರೆ, ನಾವೇ ಶಸ್ತ್ರಾಸ್ತ್ರಗಳನ್ನು ಕೈಗೆತ್ತಿಕೊಂಡು ಉಗ್ರರನ್ನು ಸದೆಬಡಿಯಬೇಕಾಗುತ್ತದೆ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿರುವುದಾಗಿ ವರದಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next