Advertisement

ದ.ಕ ಜಿಲ್ಲೆಯ ನಿರ್ಗಮಿತ ಜಿಲ್ಲಾಧಿಕಾರಿಗೆ ಕೊಲೆ ಬೆದರಿಕೆ

11:42 AM Jul 29, 2020 | mahesh |

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್‌ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಕೊಲೆ ಬೆದರಿಕೆ ಹಾಕಲಾಗಿದೆ ಎನ್ನಲಾಗಿದ್ದು ಈ ಕುರಿತು ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ ಕೊಳ್ಳಲು ಮುಂದಾಗಿದ್ದಾರೆ.

Advertisement

ಗೋಸಾಗಾಟದ ನಿಯಮಗಳ ಬಗ್ಗೆ ಸೂಚನೆ ನೀಡಿದ ಹಿನ್ನೆಲೆಯಲ್ಲಿ ವಾಟ್ಸ್‌ಆ್ಯಪ್‌ ಗ್ರೂಪ್‌ವೊಂದರಲ್ಲಿ ನಿಂದಿಸಿ ಕೊಲೆ ಬೆದರಿಕೆಯೊಡ್ಡಿರುವ ಬಗ್ಗೆ ವರದಿಯಾಗಿತ್ತು.

ಈ ಬಗ್ಗೆ ಪ್ರತಿಕ್ರಿಯಿಸಿರುವ ಡಿಸಿಪಿ ಅರುಣಾಂಶುಗಿರಿ ಅವರು, “ಜಿಲ್ಲಾಧಿಕಾರಿ ಯವರು ದೂರು ನೀಡಿಲ್ಲ. ಆದರೂ ಇಲಾಖೆಯೇ ಸ್ವಯಂ ದೂರು ದಾಖಲಿಸಿ ತನಿಖೆ ನಡೆಸಲಿದೆ’ ಎಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next