Advertisement

ಈಶ್ವರಪ್ಪಗೆ ಜೀವ ಬೆದರಿಕೆ ಕರೆ 

08:20 AM Sep 06, 2017 | Karthik A |

ಶಿವಮೊಗ್ಗ: ವಿಧಾನಪರಿಷತ್‌ ವಿಪಕ್ಷ ನಾಯಕ ಕೆ.ಎಸ್‌. ಈಶ್ವರಪ್ಪ ಅವರಿಗೆ ವಿದೇಶದಿಂದ ಜೀವ ಬೆದರಿಕೆ ಕರೆ ಬಂದಿದೆ. ಮಂಗಳವಾರ ಮಧ್ಯಾಹ್ನ ಅವರ ಮೊಬೈಲ್‌ಗೆ ಕರೆ ಮಾಡಿದ ವ್ಯಕ್ತಿ, ಮುಸ್ಲಿಮರ ಬಗ್ಗೆ ಲಘುವಾಗಿ ಮಾತನಾಡುತ್ತಿದ್ದು, ಇದನ್ನು ನಿಲ್ಲಿಸದೆ ಇದ್ದಲ್ಲಿ ಸಾಯಿಸುವುದಾಗಿ ಬೆದರಿಕೆ ಹಾಕಿದ ಎಂದು ಈಶ್ವರಪ್ಪ ತಿಳಿಸಿದ್ದಾರೆ. ಕಳೆದ ತಿಂಗಳು ಇದೇ ರೀತಿಯ ಬೆದರಿಕೆ ಕರೆ ಬಂದಿತ್ತು. ಇಂದೂ ಜೀವ ಬೆದರಿಕೆ ಕರೆ ಬಂದಿದೆ. ಮೊಬೈಲ್‌ ಸಂಖ್ಯೆ ವಿದೇಶದ್ದಾಗಿದ್ದು, ಉರ್ದುವಿನಲ್ಲಿ ಆ ವ್ಯಕ್ತಿ ಮಾತನಾಡುತ್ತಿದ್ದ ಎಂದವರು ತಿಳಿಸಿದ್ದಾರೆ. ಈ ಸಂಬಂಧ ಎಸ್‌.ಪಿ. ಅವರಿಗೆ ಬುಧವಾರ ತಾವು ದೂರು ನೀಡುವುದಾಗಿ ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next