Advertisement

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

12:13 PM Apr 23, 2024 | Team Udayavani |

ಬೆಂಗಳೂರು:  ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್‌ ಸ್ಫೋಟ ಪ್ರಕರಣ ಮಾಸುವ ಮುನ್ನವೇ ನಗರದಲ್ಲಿ ಮತ್ತೂಂದು ಹೋಟೆಲ್‌ಗೆ ಬಾಂಬ್‌ ಬೆದರಿಕೆ ಹಾಕಲಾಗಿದೆ.

Advertisement

ಜಾಲಹಳ್ಳಿ ವೃತ್ತದ ಬಳಿ ಇರುವ ಕದಂಬ ಗಾರ್ಡೇನಿಯಾ ಹೋಟೆಲ್‌ನಲ್ಲಿ ಬಾಂಬ್‌ ಇಟ್ಟಿರುವುದಾಗಿ ಸೋಮವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಅನಾಮಧೇಯ ವ್ಯಕ್ತಿಯೊಬ್ಬ ಇಂಗ್ಲಿಷ್‌ನಲ್ಲಿ ಪತ್ರ ಬರೆದು, ಮಧ್ಯಾಹ್ನ ಬಾಂಬ್‌ ಸ್ಫೋಟಗೊಳ್ಳಲಿದೆ ಎಂದು ಜಾಲಹಳ್ಳಿ ಪೊಲೀಸ್‌ ಠಾಣೆಗೆ ಕಳುಹಿಸಿ ಬೆದರಿಕೆ ಹಾಕಿದ್ದಾನೆ. ಆ ಪತ್ರ ಕಂಡು ಹೆದರಿದಪೊಲೀಸರು ಕೂಡಲೇ ಹೋಟೆಲ್‌ಗೆ ತೆರಳಿದ್ದಾರೆ.

ಬಳಿಕ ಬಾಂಬ್‌ ನಿಷ್ಕ್ರಿಯ ದಳ, ಶ್ವಾನ ದಳದ ಜತೆ ಸ್ಥಳಕ್ಕೆ ಕರೆಸಿಕೊಂಡು ಹೋಟೆಲ್‌ ಸಿಬ್ಬಂದಿ, ಗ್ರಾಹಕರನ್ನು ಹೋಟೆಲ್‌ನಿಂದ ಹೊರಗಡೆ ಕಳುಹಿಸಿ ಎಲ್ಲೆಡೆ ತಪಾಸಣೆ ನಡೆಸಿದ್ದಾರೆ. ಕೆಲ ಕಾಲ ಹೋಟೆಲ್‌ಗೆ ಬಿಗಿ ಭದ್ರತೆ ಒದಗಿಸಲಾ ಗಿತ್ತು. ಆದರೆ, ಎಲ್ಲಿಯೂ ಬಾಂಬ್‌ ಅಥವಾ ಸ್ಫೋಟಕ ವಸ್ತುಗಳು ಪತ್ತೆಯಾ ಗಿಲ್ಲ. ಹೀಗಾಗಿ ಇದೊಂದು ಹುಸಿ ಬಾಂಬ್‌ ಪತ್ರ ಎಂಬುದು ಪತ್ತೆಯಾಗಿದೆ.

ಮತ್ತೂಂದೆಡೆ ಅಪರಿಚಿತ ವ್ಯಕ್ತಿ ಬರೆದ ಪತ್ರದಲ್ಲಿ, ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟಿಸಲು ಸಹಕಾರ ನೀಡಿದ್ದು ನಾನೇ. ಈಗ ನಿಮ್ಮ ಹೋಟೆಲ್‌ಗ‌ೂ ಬಾಂಬ್‌ ಇಟ್ಟಿದ್ದೇನೆ. ಮಧ್ಯಾಹ್ನ ಬಾಂಬ್‌ ಸ್ಫೋಟಗೊಳ್ಳಲಿದೆ ಎಂದು ಬರೆದಿದ್ದಾನೆ. ಅಲ್ಲದೆ, ಪೊಲೀಸರಿಗೂ ನಿಂದಿಸಿದ್ದಾನೆ ಎಂದು ಹೇಳಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಅಪರಿಚಿತ ವ್ಯಕ್ತಿ ಪತ್ತೆ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next