Advertisement

BJP ಸೇರಿ ಅಥವಾ ತನಿಖೆ ಎದುರಿಸಿ ಎಂದು ಬೆದರಿಕೆ: ದೀದಿ ಆರೋಪ

12:37 AM Apr 08, 2024 | Team Udayavani |

ಕೋಲ್ಕತಾ: ಬಿಜೆಪಿಗೆ ಸೇರುವಂತೆ ಅಥವಾ ತನಿಖೆ ಎದುರಿಸುವಂತೆ ಟಿಎಂಸಿ ನಾಯಕರನ್ನು ಕೇಂದ್ರ ತನಿಖಾ ಸಂಸ್ಥೆಗಳು ಬೆದರಿಸುತ್ತಿವೆ ಎಂದು ಪಶ್ಚಿಮ ಬಂಗಾಲ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

Advertisement

ಪಶ್ಚಿಮ ಬಂಗಾಲದ ಪುರುಲಿಯಾ ಜಿಲ್ಲೆಯಲ್ಲಿ ರವಿವಾರ ನಡೆದ ಟಿಎಂಸಿ ಪ್ರಚಾರ ರ್ಯಾಲಿ ಉದ್ದೇಶಿಸಿ ಮಾತನಾಡಿದ ಅವರು, “ಬಿಜೆಪಿ ಇ.ಡಿ., ಸಿಬಿಐ, ಎನ್‌ಐಎ ಮತ್ತು ಐಟಿ ಇಲಾಖೆಯನ್ನು ತನ್ನ ಅಸ್ತ್ರವಾಗಿ ಬಳಸಿಕೊಳ್ಳುತ್ತಿದೆ.

ಕೇಂದ್ರ ತನಿಖಾ ಸಂಸ್ಥೆಗಳು ಟಿಎಂಸಿ ನಾಯಕರಿಗೆ ಕಿರುಕುಳ ನೀಡುತ್ತಿವೆ. ಯಾವುದೇ ಪೂರ್ವ ಮಾಹಿತಿ ನೀಡದೇ, ಮನೆಗಳಿಗೆ ನುಗ್ಗಿ ದಾಳಿ ನಡೆಸುತ್ತಿದ್ದಾರೆ. ಮನೆಯಲ್ಲಿ ಎಲ್ಲರೂ ಮಲಗಿರುವಾಗ ಮನೆಗೆ ನುಗ್ಗಿದರೆ, ಅಧಿಕಾರಿಗಳ ಮೇಲೆ ದಾಳಿ ಮಾಡದೇ ಮಹಿಳೆಯರು ಏನು ತಾನೇ ಮಾಡುತ್ತಾರೆ’ ಎಂದು ಪ್ರಶ್ನಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next