Advertisement

ಈಶ್ವರಪ್ಪ ವಿರುದ್ಧ ಹೇಳಿಕೆ ನೀಡದಂತೆ ಬೆದರಿಕೆ: ದೂರು

06:35 AM Feb 19, 2018 | |

ಶಿವಮೊಗ್ಗ: ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕ ಕೆ.ಎಸ್‌. ಈಶ್ವರಪ್ಪ ಅವರ ಕುರಿತು ಹೇಳಿಕೆ ನೀಡದಂತೆ ಜಿಲ್ಲಾ ಉಪಾಧ್ಯಕ್ಷ ಬಿಳಕಿ ಕೃಷ್ಣಮೂರ್ತಿ ಅವರಿಗೆ ಬೆದರಿಕೆ ಬಂದಿದೆ ಎನ್ನಲಾಗಿದ್ದು, ಈ ಸಂಬಂಧ ಬಿಳಕಿ ಕೃಷ್ಣಮೂರ್ತಿಯವರು ಜಿಲ್ಲಾ ರಕ್ಷಣಾಧಿಕಾರಿಗಳಿಗೆ ದೂರು ನೀಡಿದ್ದಾರೆ. 

Advertisement

ಬೈಕ್‌ನಲ್ಲಿ ಆಗಮಿಸಿದ ಇಬ್ಬರು ವ್ಯಕ್ತಿಗಳು, ಈಶ್ವರಪ್ಪ ವಿರುದ್ಧ ಮಾತನಾಡಕೂಡದು ಎಂದು ಎಚ್ಚರಿಕೆ ನೀಡಿ ಹೋಗಿದ್ದಾರೆ ಎನ್ನಲಾಗಿದೆ. ಶಿವಮೊಗ್ಗ ವಿಧಾನಸಭಾ ಕ್ಷೇತ್ರದಿಂದ ರುದ್ರೇಗೌಡ ಅವರಿಗೆ ಟಿಕೆಟ್‌ ನೀಡಬೇಕು ಎಂದು ಕೆಲ ಮುಖಂಡರು ಬಿ.ಎಸ್‌.ಯಡಿಯೂರಪ್ಪಗೆ ಮನವಿ ಮಾಡುವ ಸಂದರ್ಭದಲ್ಲಿ ಬಿಳಕಿ ಕೃಷ್ಣಮೂರ್ತಿ, ಕೆ.ಎಸ್‌.ಈಶ್ವರಪ್ಪ ಬಗ್ಗೆ ಲಘುವಾಗಿ ಮಾತನಾಡಿದ್ದರು ಎನ್ನಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next