Advertisement

Kerala: ಗಲ್ಲುಶಿಕ್ಷೆ ವಿಧಿಸಿದ ಜಡ್ಜ್‌ಗೆ ಬೆದರಿಕೆ: ನಾಲ್ವರ ಬಂಧನ

08:54 PM Feb 02, 2024 | Team Udayavani |

ಆಲಪ್ಪುಳ: ಬಿಜೆಪಿ ಒಬಿಸಿ ಘಟಕದ ನಾಯಕ ರಂಜಿತ್‌ ಶ್ರೀನಿವಾಸನ್‌ ಕೊಲೆ ಪ್ರಕರಣದಲ್ಲಿ 15 ಮಂದಿ ಪಿಎಫ್ಐ ಕಾರ್ಯಕರ್ತರಿಗೆ ಮರಣದಂಡನೆ ಶಿಕ್ಷೆ ವಿಧಿಸಿದ ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ನಾಲ್ವರನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ.

Advertisement

ಕೇರಳದ ಮಾವೆಲಿಕ್ಕಾರ ಹೆಚ್ಚುವರಿ ಸೆಷನ್ಸ್‌ ಜಡ್ಜ್ ವಿ.ಜಿ.ಶ್ರೀದೇವಿ ಅವರು ತೀರ್ಪು ಘೋಷಿಸಿದ ಬೆನ್ನಲ್ಲೇ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಬೆದರಿಕೆ ಹಾಕಲಾಗಿತ್ತು. ಈ ಸಂಬಂಧ ಒಟ್ಟು 5 ಕೇಸು ದಾಖಲಾಗಿದ್ದು, ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next