Advertisement

Three arrested; FSL ವರದಿ ಬಹಿರಂಗ ಮಾಡಲು ಹಿಂಜರಿಕೆ ಏಕೆ?: ಆರ್. ಅಶೋಕ್

07:17 PM Mar 04, 2024 | Team Udayavani |

ಬೆಂಗಳೂರು: ”ವಿಧಾನಸೌಧದಲ್ಲಿ ಪಾಕಿಸ್ಥಾನ್ ಜಿಂದಾಬಾದ್ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ವರದಿ ಬಂದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಕಡೆಗೂ ಜನಾಕ್ರೋಶಕ್ಕೆ ಮಣಿದು ಮೂವರು ಆರೋಪಿಗಳನ್ನು ಬಂಧಿಸಿದೆ” ಎಂದು ವಿಪಕ್ಷ ನಾಯಕ ಆರ್.ಅಶೋಕ್ ಪ್ರತಿಕ್ರಿಯಿಸಿದ್ದಾರೆ.

Advertisement

ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅಶೋಕ್ ಅವರು, ”FSL ವರದಿಯಲ್ಲಿ ಘೋಷಣೆ ಕೂಗಿದ್ದು ಧೃಢಪಟ್ಟ ನಂತರವೇ ಈ ಮೂವರು ಆರೋಪಿಗಳ ಬಂಧನವಾಗಿರುವುದು ಸ್ಪಷ್ಟಾಗಿದ್ದರೂ, ಸರ್ಕಾರ ಇನ್ನೂ FSL ವರದಿ ಬಹಿರಂಗ ಮಾಡದಿರುವುದು ಅನೇಕ ಅನುಮಾನಗಳಿಗೆ ಎಡೆ ಮಾಡಿಕೊಡುತ್ತಿದೆ. ಸರ್ಕಾರ ಏನನ್ನೂ ಮುಚ್ಚಿಡುತ್ತಿಲ್ಲ, ಯಾರನ್ನೂ ರಕ್ಷಿಸುತ್ತಿಲ್ಲ ಎನ್ನುವುದಾದರೆ ವರದಿ ಬಹಿರಂಗ ಮಾಡಲು ಹಿಂಜರಿಕೆ ಏಕೆ? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: Pak ಪರ ಘೋಷಣೆ ಕೂಗಿದ ಮೂವರು ಆರೋಪಿಗಳ ಬಂಧನ

”ಸರ್ಕಾರ ಈ ಮೂವರು ಆರೋಪಿಗಳನ್ನು ಬಂಧಿಸಿದರೆ ಸಾಲದು, ಇವರ ಮೇಲೆ IPC ಯ ಸೆಕ್ಷನ್ 124A ಅಡಿ ದೇಶದ್ರೋಹ ಪ್ರಕರಣ ದಾಖಲಿಸಿ ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಅವರನ್ನೂ ಸಹ ಈ ಪ್ರಕರಣದಲ್ಲಿ ಶಾಮೀಲು ಮಾಡಬೇಕು. ಇದರ ಜೊತೆಗೆ 25 ಜನರಿಗೆ ಪಾಸ್ ನೀಡಿ ಸುಮಾರು ನೂರು ಜನ ಬೆಂಬಲಿಗರಿಗೆ ವಿಧಾನಸೌಧದ ಒಳಗೆ ಪ್ರವೇಶ ನೀಡಿ ಕರ್ತವ್ಯ ಲೋಪ ಎಸಗಿದ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿ ವಿಚಾರಣೆ ನಡೆಸಬೇಕು” ಎಂದು ಒತ್ತಾಯಿಸಿದ್ದಾರೆ.

”ಈ ಇಡೀ ಪ್ರಕರಣ ಕಾಂಗ್ರೆಸ್ ಪಕ್ಷದ ದೇಶಪ್ರೇಮಕ್ಕೆ, ರಾಷ್ಟ್ರ ನಿಷ್ಠೆಗೆ ಒಂದು ಅಗ್ನಿ ಪರೀಕ್ಷೆಯಾಗಿದ್ದು, ಕಾಂಗ್ರೆಸ್ ಸರ್ಕಾರದ ನಡೆಯನ್ನ ಬರೀ ಕರ್ನಾಟಕ ಅಲ್ಲ, ಇಡೀ ದೇಶದ ಜನತೆ ಅತ್ಯಂತ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ” ಎಂದು ಪ್ರತಿಕ್ರಿಯಿಸಿದ್ದಾರೆ.

Advertisement

”FSL ವರದಿ ಬರುವ ಮುನ್ನವೇ ಮಾಧ್ಯಮಗಳ ಮೇಲೆ ಪಕ್ಷಪಾತ, ವಿಡಿಯೋ ತಿರುಚಿರುವ ಆರೋಪ ಹೊರಿಸಿದರಲ್ಲ ಸಚಿವ ಪ್ರಿಯಾಂಕ್ ಖರ್ಗೆ
ಅವರೇ, ದೇಶ ವಿಭಜಕರ ಭಜನೆ ಮಾಡುವ ನಿಮಗೆ ಸಚಿವರಾಗಿ, ಶಾಸಕರಾಗಿ ಮುಂದುವರೆಯುವ ಯಾವ ಅರ್ಹತೆ, ನೈತಿಕತೆ, ಯೋಗ್ಯತೆ ಉಳಿದಿದೆ? ದೇಶದ ಸಾರ್ವಭೌಮತೆಯ ಬಗ್ಗೆ ನಿಷ್ಠೆ ಹೊಂದಿರುತ್ತೇನೆ, ರಕ್ಷಣೆ ಮಾಡುತ್ತೇನೆ ಎಂದು ಪ್ರಮಾಣ ವಚನ ಸ್ವೀಕರಿಸಿ ದೇಶದ್ರೋಹಿಗಳ ಪರ ವಹಿಸಿಕೊಳ್ಳುವ ತಾವು ಸಂವಿಧಾನ ದ್ರೋಹಿ, ದೇಶದ್ರೋಹಿ ಅಲ್ಲದೆ ಮತ್ತೇನು?” ಎಂದು ಆಕ್ರೋಶ ಹೊರ ಹಾಕಿದ್ದಾರೆ.

”FSL ವರದಿ ಬರುವ ಮುನ್ನವೇ ಪಾಕಿಸ್ಥಾನ್ ಜಿಂದಾಬಾದ್ ಘೋಷಣೆ ಕೂಗಿಯೇ ಇಲ್ಲ ಅಂತ ನಿಮ್ಮ ಬ್ರದರ್ಸ್ ಪರ ತೀರ್ಪು ಕೊಟ್ಟುಬಿಟ್ಟರಲ್ಲ ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ, ದೇಶದ್ರೋಹಿಗಳನ್ನು ರಕ್ಷಿಸಲು ಹೆತ್ತ ತಾಯಿಯಂತಹ ಭಾರತ ಮಾತೆಗೇ ದ್ರೋಹ ಬಗೆಯುವುದು ಮಹಾ ಪಾಪವಲ್ಲವೇ?” ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಐಜಿಪಿಗೆ ಮನವಿ
ರಾಜ್ಯಸಭಾ ಸಂಸದ ನಾಸೀರ್‌ ಹುಸೇನ್‌ ಬೆಂಬಲಿಗರು ವಿಧಾನಸೌಧದಲ್ಲಿ ಪಾಕಿಸ್ಥಾನ ಜಿಂದಾಬಾದ್ ಘೋಷಣೆ ಕೂಗಿರುವುದರ ಕುರಿತ ಎಫ್‍ಎಸ್‍ಎಲ್ ವರದಿ ಬಹಿರಂಗಪಡಿಸುವಂತೆ ಬಿಜೆಪಿ ನಿಯೋಗ ಇಂದು ಐಜಿಪಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದೆ. ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ, ಶಾಸಕರಾದ ರವಿ ಸುಬ್ರಹ್ಮಣ್ಯ, ಸಿ.ಕೆ. ರಾಮಮೂರ್ತಿ, ಉದಯ್ ಬಿ.ಗರುಡಾಚಾರ್, ಧೀರಜ್‌ ಮುನಿರಾಜು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next