Advertisement

ವಿಟ್ಲ: ಬಸ್‌ ನಿಲ್ದಾಣದಲ್ಲಿ ಶಾಂತಿ ಭಂಗ

12:56 AM Dec 10, 2022 | Team Udayavani |

ವಿಟ್ಲ: ಸಾರ್ವಜನಿಕ ಸ್ಥಳದಲ್ಲಿ ಅವಾಚ್ಯ ಶಬ್ದಗಳಿಂದ ಬೈದಾಡಿಕೊಂಡು ಕೈಯಿಂದ ದೂಡಾಡಿಕೊಂಡು ಸಾರ್ವಜನಿಕ ಶಾಂತಿ ನೆಮ್ಮದಿಗೆ ಕಾರಣರಾದ ಮೂವರು ಬಸ್‌ ಚಾಲಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆರೋಪಿಗಳಾದ ಚಿಂತನ್‌, ಹೊನ್ನಯ್ಯ, ಯತಿರಾಜ್‌ ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.

Advertisement

ವಿಟ್ಲಕಸಬಾ ಗ್ರಾಮದ ವಿಟ್ಲ ಹಳೆ ಬಸ್‌ ನಿಲ್ದಾಣದಲ್ಲಿದ್ದ ಮೂವರು ಬಸ್‌ ಚಾಲಕರು ಸಾರ್ವಜನಿಕ ಸ್ಥಳವಾದ ಬಸ್‌ ತಂಗುದಾಣದಲ್ಲಿ ಪರಸ್ಪರ ಒಬ್ಬರಿಗೊಬ್ಬರು ಅವಾಚ್ಯ ಶಬ್ದಗಳಿಂದ ಬೈದಾಡಿಕೊಂಡು ಕೈಯಿಂದ ದೂಡಾಡಿಕೊಂಡು ಸಾರ್ವಜನಿಕ ಶಾಂತಿ ನೆಮ್ಮದಿಗೆ ಭಂಗವಾಗುವ ರೀತಿಯಲ್ಲಿ ಕಲಹ ನಡೆಸುತ್ತಿದ್ದು, ಆ ಮೂವರನ್ನು ಹಿಡಿದು ಠಾಣೆಗೆ ಹಾಜರುಪಡಿಸಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next