Advertisement

ಬೆಂಗಳೂರಿನಿಂದ ಬಂದ ಐವರಲ್ಲಿ ಮೂವರಿಗೆ ಕೋವಿಡ್ ಪಾಸಿಟಿವ್: ಜಡ್ಕಲ್ ಕಟ್ಟೆ ಬಳಿ ಸೀಲ್ ಡೌನ್

01:54 PM Jul 06, 2020 | keerthan |

ಕೊಲ್ಲೂರು: ಬೆಂಗಳೂರಿನಿಂದ ಇತ್ತೀಚೆಗೆ ಆಗಮಿಸಿದ್ದ ಮೂವರಲ್ಲಿ ಕೋವಿಡ್-19 ಸೋಂಕು ಪಾಸಿಟಿವ್ ಕಂಡುಬಂದಿರುವ ಹಿನ್ನಲೆಯಲ್ಲಿ ಕೊಲ್ಲೂರು ಬಳಿಯ ಜಡ್ಕಲ್ ಕಟ್ಟೆಯಲ್ಲಿ ಸೀಲ್ ಡೌನ್ ಮಾಡಲಾಗಿದೆ.

Advertisement

ಜಡ್ಕಲ್ ನಿವಾಸಿಗಳಾದ ಐವರು ಇತ್ತೀಚೆಗೆ ಬೆಂಗಳೂರಿನಿಂದ ಊರಿಗೆ ಆಗಮಿಸಿದ್ದರು. ಆ ಐವರಲ್ಲಿ ಮೂವರಿಗೆ ಸೋಂಕು ದೃಢವಾಗಿದೆ ಎಂದು ವರದಿಯಾಗಿದೆ. ಅವರ ನಿವಾಸವನ್ನು ಇಂದು ಸೀಲ್ ಡೌನ್ ಮಾಡಲಾಗಿದೆ.

ಕರಾವಳಿ ಜಿಲ್ಲೆಗಳಲ್ಲಿ ಕೋವಿಡ್-19 ಸೋಂಕು ಆರ್ಭಟ ಮುಂದುವರಿದಿದೆ. ಸೋಂಕಿತರ ಸಂಖ್ಯೆಯಲ್ಲಿ ಹಠಾತ್ ಏರಿಕೆ ಕಂಡಿದ್ದ ಉಡುಪಿ ಜಿಲ್ಲೆಯಲ್ಲಿ ಸದ್ಯ ಕಡಿಮೆಯಾಗಿದೆ. ಜಿಲ್ಲೆಯಲ್ಲಿ ರವಿವಾರ 45 ಹೊಸ ಸೋಂಕು ಪ್ರಕರಣಗಳು ದೃಢವಾಗಿತ್ತು. ನೆರೆಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಭಾರಿ ಪ್ರಮಾಣದಲ್ಲಿ ಏರಿಕೆ ಕಾಣುತ್ತಿದೆ. ರವಿವಾರ ಮೊದಲ ಬಾರಿಗೆ ಒಂದು ದಿನದ ಸೋಂಕಿತರ ಸಂಖ್ಯೆ ನೂರರ ಗಡಿ ದಾಟಿದೆ. ರವಿವಾರ ದ. ಜಿಲ್ಲೆಯಲ್ಲಿ 147 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿತ್ತು. ಇದರಿಂದ ಜಿಲ್ಲೆಯ ಸೋಂಕಿತರ ಸಂಖ್ಯೆ 1234ಕ್ಕೆ ಏರಿಕೆಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next