Advertisement

ಮೂವರು ಜಿಲ್ಲಾಧಿಕಾರಿಗಳ ವರ್ಗ; ಬಿಎಂಆರ್‌ಡಿಎ ಆಯುಕ್ತರಾಗಿ ರಮ್ಯಾ

10:50 PM Jul 17, 2023 | Team Udayavani |

 

Advertisement

ಬೆಂಗಳೂರು: ವಿಜಯನಗರ, ಯಾದಗಿರಿ, ಬಳ್ಳಾರಿ ಜಿಲ್ಲೆಗಳಿಗೆ ಜಿಲ್ಲಾಧಿಕಾರಿಗಳನ್ನು ನೇಮಿಸಿರುವ ರಾಜ್ಯ ಸರ್ಕಾರ, ಐವರು ಐಎಎಸ್‌ ಅಧಿಕಾರಿಗಳನ್ನು ವರ್ಗಾಯಿಸಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯಕಾರಿ ನಿರ್ದೇಶಕಿಯಾಗಿದ್ದ ಎಸ್‌.ರಮ್ಯಾ ಅವರನ್ನು ಬೆಂಗಳೂರು ಮಹಾನಗರ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ (ಬಿಎಂಆರ್‌ಡಿಎ) ಆಯುಕ್ತರಾಗಿ ವರ್ಗಾಯಿಸಿದ್ದು, ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ದಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿಯಾಗಿದ್ದ ಡಿ.ಭಾರತಿ ಅವರನ್ನು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಕಾರ್ಯದರ್ಶಿಯಾಗಿ ವರ್ಗಾಯಿಸಿದೆ.

ಇನ್ನುಳಿದಂತೆ ಚಿತ್ರದುರ್ಗ ಜಿಪಂ ಸಿಇಒ ಆಗಿದ್ದ ಎಂ.ಎಸ್‌. ದಿವಾಕರ ಅವರನ್ನು ವಿಜಯನಗರ ಜಿಲ್ಲಾಧಿಕಾರಿಯಾಗಿ ವರ್ಗಾಯಿಸಿದ್ದರೆ, ವಿಜಯನಗರ ಜಿಲ್ಲಾಧಿಕಾರಿಯಾಗಿದ್ದ ಟಿ.ವೆಂಕಟೇಶ್‌ ಅವರನ್ನು ಬಳ್ಳಾರಿ ಜಿಲ್ಲಾಧಿಕಾರಿಯನ್ನಾಗಿಯೂ ಹಾಗೂ ಗದಗ ಜಿಪಂ ಸಿಇಒ ಆಗಿದ್ದ ಡಾ.ಬಿ. ಸುರೇಶ್‌ ಅವರನ್ನು ಯಾದಗಿರಿ ಜಿಲ್ಲಾಧಿಕಾರಿಯನ್ನಾಗಿಯೂ ವರ್ಗಾವಣೆ ಮಾಡಿದೆ.

Advertisement

Udayavani is now on Telegram. Click here to join our channel and stay updated with the latest news.

Next