Advertisement

ಪಾಕ್ ಪರ ಘೋಷಣೆ; ಮೂವರು ವಿದ್ಯಾರ್ಥಿಗಳು ಮತ್ತೆ ಪೊಲೀಸ್ ವಶಕ್ಕೆ, ಮಾರ್ಚ್ 2ರವರೆಗೆ ಬಂಧನ

09:47 AM Feb 18, 2020 | Nagendra Trasi |

ಹುಬ್ಬಳ್ಳಿ:ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋಕುಲ ರಸ್ತೆ ಪೊಲೀಸರು ಸೋಮವಾರ ಮೂವರು ಕಾಶ್ಮೀರಿ ಕಾಶ್ಮೀರಿ ವಿದ್ಯಾರ್ಥಿಗಳನ್ನು ಭಾನುವಾರ ತಡರಾತ್ರಿ ಮತ್ತೆ ಬಂಧಿಸಿದ್ದು, ಸೋಮವಾರ ಕೋರ್ಟ್ ಗೆ ಹಾಜರುಪಡಿಸಿದ್ದಾರೆ.

Advertisement

ಇಲ್ಲಿನ 3ನೇ ಜೆಎಂಎಫ್ ಸಿ ಕೋರ್ಟ್ ನ ನ್ಯಾಯಾಧೀಶೆ ಪುಷ್ಪಾ ಅವರು ಮೂವರು ವಿದ್ಯಾರ್ಥಿಗಳನ್ನು ಮಾರ್ಚ್ 2ರವರೆಗೆ ನ್ಯಾಯಾಂಗ ಬಂಧನಕ್ಕೊಪ್ಪಿಸಿದೆ ಎಂದು ವರದಿ ತಿಳಿಸಿದೆ.

ಹುಬ್ಬಳ್ಳಿ ತಾಲೂಕು ಕೊಟಗುಣಸಿಯಲ್ಲಿರುವ ಕೆಎಲ್ ಇ ಎಂಜಿನಿಯರಿಂಗ್ ಕಾಲೇಜಿನ ಹಾಸ್ಟೆಲ್ ನಲ್ಲಿ ಪುಲ್ವಾಮಾ ದಾಳಿಯ ಕರಾಳ ದಿನಾಚರಣೆ ಸಂದರ್ಭದಲ್ಲೂ ಕಾಶ್ಮೀರಿ

ಸಂಭ್ರಮಾಚರಣೆ ಮಾಡಿದ್ದಾರೆ. ಅಲ್ಲದೆ ಪಾಕಿಸ್ತಾನ ಜಿಂದಾಬಾದ್, ಕಾಶ್ಮೀರಿ ಆಜಾದಿ ಕರೆಂಗೆ ಎಂಬ ಘೋಷಣೆಗಳನ್ನು ಕೂಗುತ್ತ ಅದನ್ನು ವಿಡಿಯೋ ಮಾಡಿ ಜಾಲತಾಣಗಳಲ್ಲಿ ಹಾಕಿಕೊಂಡಿ.

ಆ ವಿಡಿಯೋ ವೈರಲ್  ಆಗಿದ್ದು, ಈ ಕುರಿತು ಕಾಲೇಝಿನ ಪ್ರಾಂಶುಪಾಲರು ಗೋಕುಲ ರಸ್ತೆ ಠಾಣೆಯಲ್ಲಿ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ್ದರು. ದೂರಿನ ಹಿನ್ನೆಲೆಯಲ್ಲಿ ಗೋಕುಲ ರಸ್ತೆ ಪೊಲೀಸರು ಶನಿವಾರ ಮೂವರು ವಿದ್ಯಾರ್ಥಿಗಳನ್ನು ಬಂಧಿಸಿ ಸಿಆರ್ ಪಿಸಿ ಕಾಯ್ದೆ 169ರ ಅಡಿ ಸ್ಟೇಶನ್ ಜಾಮೀನು ನೀಡಿ ಬಿಡುಗಡೆಗೊಳಿಸಿದ್ದರು. ಆದರೆ ಈ ಪ್ರಕರಣದ ಬಗ್ಗೆ ಪೊಲೀಸರು ಸರಿಯಾದ ಮಾಹಿತಿ ನೀಡದೆ ಇದ್ದ ಪರಿಣಾಮ ಗೊಂದಲ ಉಂಟಾಗಿ, ಹಿಂದುಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು.

Advertisement
Advertisement

Udayavani is now on Telegram. Click here to join our channel and stay updated with the latest news.

Next