Advertisement

ದೋಣಿ ಮಗುಚಿ ನಾಪತ್ತೆಯಾಗಿದ್ದ ಮೂವರು ಮೀನುಗಾರರ ಶವ ಬೇಕಲ್ ಕೋಟೆ ಬಳಿ ಪತ್ತೆ

09:44 AM Jul 05, 2021 | Team Udayavani |

ಕಾಸರಗೋಡು: ಕಾಸರಗೋಡು ತಳಂಗರೆ ಸಮೀಪದ ಕಸಬಾ ಕಡಪ್ಪುರ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ರವಿವಾರ ಬೆಳಗ್ಗೆ ಮಗುಚಿ ಬಿದ್ದ ಘಟನೆಯಲ್ಲಿ ನಾಪತ್ತೆಯಾಗಿದ್ದ ಮೂವರ ಶವ ಇಂದು ಪತ್ತೆಯಾಗಿದೆ.

Advertisement

ನಾಪತ್ತೆಯಾಗಿದ್ದ ಕಡಪ್ಪುರ ನಿವಾಸಿಗಳಾದ ಸಂದೀಪ್ (33 ವ), ರತೀಶನ್ (30 ವ) ಮತ್ತು ಕಾರ್ತಿಕ್ (29 ವ) ಅವರ ಶವ ಬೇಕಲ ಕೋಟೆಯ ಪತ್ತೆಯಾಗಿದೆ.

ಇದನ್ನೂಓದಿ:ಹೆಂಡತಿಯಾಗಿದ್ದವಳು ಮಲತಾಯಿಯಾಗಿ ಬಂದಾಗ…! ಬದೌನ್ ನಲ್ಲಿ ನಡೆದ ಪ್ರಸಂಗ

ರವಿವಾರ ಬೆಳಗ್ಗೆ ಕಾಸರಗೋಡು ಕಸಬಾ ಕಡಪ್ಪುರದಿಂದ ಮೀನುಗಾರಿಕೆಗೆ ತೆರಳಿದ್ದ ದೋಣಿ ಅಳಿವೆ ಬಾಗಿಲಿನಲ್ಲಿ  ಮಗುಚಿ ಬಿದ್ದಿತ್ತು. ಈ ವೇಳೆ  ಮೂವರು ನಾಪತ್ತೆಯಾಗಿದ್ದರೆ, ನಾಲ್ವರು ಈಜಿ ದಡ ಸೇರಿ ಅಪಾಯದಿಂದ ಪಾರಾಗಿದ್ದರು.

ಸಮುದ್ರದಲ್ಲಿ ಪ್ರಬಲವಾದ ಗಾಳಿ ಬೀಸಿದ್ದರಿಂದ ನಿಯಂತ್ರಣ ತಪ್ಪಿದ ದೋಣಿಯು ಮಗುಚಿ ಬಿದ್ದಿದೆ ಎನ್ನಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next