Advertisement

ಮೂವರು ಗಾಂಜಾ ಮಾರಾಟಗಾರರ ಸೆರೆ

11:42 AM Oct 04, 2017 | Team Udayavani |

ಬೆಂಗಳೂರು: ವಿಶ್ವೇಶ್ವರಪುರದ ರಾಘವೇಂದ್ರ ದೇವಾಲಯದ ಬಳಿ ಪಾಳು ಬಿದ್ದ ಮನೆಯೊಂದರ ಬಳಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ವಿವಿಪುರಂ ಠಾಣೆ ಪೊಲೀಸರು ಬಂಧಿಸಿದ್ದಾರೆ. ಯಲಹಂಕದ ಇಮ್ರಾನ್‌ (20), ಆರ್‌.ಟಿ.ನಗರದ ಮೊಹಮ್ಮದ್‌ ಕಲೀಲ್‌ (23) ಹಾಗೂ ಜೆ.ಪಿ.ನಗರದ ರವಿ (24) ಬಂಧಿತರು. ಇವರಿಂದ 1 ಕೆ.ಜಿ. 600 ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ.

Advertisement

ಆರೋಪಿಗಳು ಬೇರೆಡೆಯಿಂದ ಗಾಂಜಾ ತಂದು ಪಾಳು ಮನೆಯಲ್ಲಿ ಸಣ್ಣ ಸಣ್ಣ ಪ್ಯಾಕೆಟ್‌ಗಳನ್ನು ಕಟ್ಟುತ್ತಿದ್ದ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ. ಆಂಧ್ರಪ್ರದೇಶ ಹಾಗೂ ಅಕ್ಕ-ಪಕ್ಕದ ಜಿಲ್ಲೆಗಳಲ್ಲಿ ಅಕ್ರಮವಾಗಿ ಬೆಳೆಯುವ ಗಾಂಜಾ ತಂದು ಮಾರಾಟ ಮಾಡುತ್ತಿದ್ದುದಾಗಿ ಆರೋಪಿಗಳು ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳ ವಿರುದ್ಧ ಎನ್‌ಡಿಪಿಎಸ್‌ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next