Advertisement

ಕೋಲ್ಕತಾ ರ್ಯಾಲಿಗೆ ರಾಜ್ಯದ ಮೂವರು

12:30 AM Jan 19, 2019 | Team Udayavani |

ಕೋಲ್ಕತಾ: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಆಡಳಿತದಲ್ಲಿರುವ ಬಿಜೆಪಿಯನ್ನು ಕಟ್ಟಿಹಾಕುವ ಸಲುವಾಗಿ ವಿಪಕ್ಷಗಳನ್ನು ಒಗ್ಗೂಡಿಸಲು ಯತ್ನಿಸುತ್ತಿರುವ ಟಿಎಂಸಿ ನಾಯಕಿ, ಪಶ್ಚಿಮ ಬಂಗಾಲ ಸಿಎಂ ಮಮತಾ ಬ್ಯಾನರ್ಜಿ ಶನಿವಾರ ಆಯೋಜಿಸಿರುವ ವಿಪಕ್ಷಗಳ ಮೆಗಾ ರ್ಯಾಲಿಯಲ್ಲಿ ಕರ್ನಾಟಕದ ಮೂವರು ನಾಯಕರು ಪಾಲ್ಗೊಳ್ಳಲಿದ್ದಾರೆ. ಕರ್ನಾಟಕದಲ್ಲಿ ಜೆಡಿಎಸ್‌-ಕಾಂಗ್ರೆಸ್‌ ಸರಕಾರ ಅಸ್ತಿತ್ವದ ವೇಳೆ ಒಗ್ಗಟ್ಟು ತೋರಿದ್ದ ಈ ಎಲ್ಲ ನಾಯಕರು ಮತ್ತೂಮ್ಮೆ ಸೇರಲಿದ್ದಾರೆ.

Advertisement

ಎಐಸಿಸಿ ಪರವಾಗಿ ಹಾಗೂ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಪ್ರತಿನಿಧಿಯಾಗಿ ಮಲ್ಲಿಕಾರ್ಜುನ ಖರ್ಗೆ ಪಾಲ್ಗೊಂಡರೆ, ಜೆಡಿಎಸ್‌ನಿಂದ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ. ದೇವೇಗೌಡ ಮತ್ತು ಮುಖ್ಯಮಂತ್ರಿ ಕುಮಾರ ಸ್ವಾಮಿ ಭಾಗವಹಿಸಲಿದ್ದಾರೆ. ಮಾಜಿ ಪ್ರಧಾನಿ ದೇವೇಗೌಡರು ಈಗಾಗಲೇ ಕೋಲ್ಕತಾ ತಲುಪಿದ್ದು, ಮಮತಾ ಬ್ಯಾನರ್ಜಿ ಅವರ ಜತೆ ಒಂದು ಸುತ್ತಿನ ಮಾತುಕತೆಯನ್ನೂ ನಡೆಸಿದ್ದಾರೆ. “ಬಿಜೆಪಿಯನ್ನು ಸೋಲಿಸಲು ದೇಶವೇ ಪಣ ತೊಟ್ಟು ನಿಂತಿದೆ. ಜಾತ್ಯತೀತ ಸರಕಾರ ರಚನೆ ಮಾಡುವ ಪ್ರಯತ್ನದಲ್ಲಿ ಪಶ್ಚಿಮ ಬಂಗಾಲ ಸಿಎಂ ಮಮತಾ ಬ್ಯಾನರ್ಜಿ ಕೆಲಸ ಐತಿಹಾಸಿಕ ವಾದದ್ದು’ ಎಂದು ದೇವೇಗೌಡ ಶ್ಲಾಘಿಸಿದ್ದಾರೆ.

ಈ ರ್ಯಾಲಿಯಲ್ಲಿ ಅಖೀಲೇಶ್‌ ಯಾದವ್‌, ಕೇಜ್ರಿವಾಲ್‌, ಫಾರೂಕ್‌ ಅಬ್ದುಲ್ಲಾ, ಒಮರ್‌ ಅಬ್ದುಲ್ಲಾ, ಆಂಧ್ರ ಸಿಎಂ ಚಂದ್ರಬಾಬು ನಾಯ್ಡು, ಡಿಎಂಕೆ ನಾಯಕ ಎಂ.ಕೆ. ಸ್ಟಾಲಿನ್‌ ಕೂಡ ಪಾಲ್ಗೊಳ್ಳಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next