Advertisement

ಜಮ್ಮು-ಕಾಶ್ಮೀರ: ಮೂವರು ಲಷ್ಕರ್ ಭಯೋತ್ಪಾದಕರ ಬಂಧನ, ಶಸ್ತ್ರಾಸ್ತ್ರ, ಸ್ಫೋಟಕ ವಶ

03:37 PM May 23, 2022 | Team Udayavani |

ಜಮ್ಮು-ಕಾಶ್ಮೀರ: ಲಷ್ಕರ್ ಎ ತೊಯ್ಬಾ ಸಂಘಟನೆಯ ಮೂವರು ಭಯೋತ್ಪಾದಕರನ್ನು ಜಮ್ಮು-ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಸೋಮವಾರ (ಮೇ 23) ಬಂಧಿಸಿದ್ದು, ಶಸ್ತ್ರಾಸ್ತ್ರ ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವರದಿ ತಿಳಿಸಿದೆ.

Advertisement

ಇದನ್ನೂ ಓದಿ:ಐಪಿಎಲ್ ಪ್ಲೇ ಆಫ್ ಗೆ ವರುಣನ ಕಾಟ; ಗಾಳಿಗೆ ಹಾರಿ ಹೋಯ್ತು ಈಡನ್ ಗಾರ್ಡನ್ ನ ಹೊದಿಕೆ!

ಬಂಧಿತ ಉಗ್ರರು ಬಾರಾಮುಲ್ಲಾದ ಪಠಾಣ್ ಪ್ರದೇಶದ ಸರ್ ಪಂಚ್ ಹತ್ಯೆಯ ಪ್ರಕರಣದಲ್ಲಿ ಶಾಮೀಲಾಗಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಏಪ್ರಿಲ್ 15ರಂದು ಗೋಶ್ ಬುಘ್ ನ ಮಂಝೂರ್ ಅಹ್ಮದ್ ಬಾಂಗೂ ಅವರನ್ನು ಹತ್ಯೆಗೈದ ಪ್ರಕರಣದಲ್ಲಿ ಶಾಮೀಲಾಗಿರುವುದಾಗಿ ತನಿಖೆಯಲ್ಲಿ ತಿಳಿದು ಬಂದಿದೆ. ಬಂಧಿತ ಉಗ್ರರನ್ನು ನೂರ್ ಮೊಹಮ್ಮದ್ ಯಾಟೂ, ಮೊಹಮ್ಮದ್ ರಫೀಕ್ ಪರ್ರೆ ಮತ್ತು ಆಶೀಖ್ ಹುಸೈನ್ ಪರ್ರೆ ಎಂದು ಗುರುತಿಸಲಾಗಿದ್ದು, ಈ ಮೂವರು ಗೋಶ್ ಬುಘ್ ನಿವಾಸಿಗಳು ಎಂದು ಬಾರಾಮುಲ್ಲಾ ಎಸ್ ಎಸ್ ಪಿ ರಾಯೀಸ್ ಅಹ್ಮದ್ ಭಟ್ ತಿಳಿಸಿದ್ದಾರೆ.

ಬಂಧಿತ ಭಯೋತ್ಪಾದಕರು ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುವ ಲಷ್ಕರ್ ಎ ತೊಯ್ಬಾದ ಮೊಹಮ್ಮದ್ ಅಫ್ಜಲ್ ಲೋನ್ ಜತೆ ಸಂಪರ್ಕದಲ್ಲಿದ್ದರು ಎಂದು ವರದಿ ತಿಳಿಸಿದೆ. ಬಂಧಿತ ಉಗ್ರರಿಂದ ಮೂರು ಪಿಸ್ತೂಲ್, ಮೂರು ಗ್ರೆನೇಡ್ಸ್ ಹಾಗೂ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಐಜಿಪಿ ವಿಜಯ್ ಕುಮಾರ್ ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next