Advertisement

ವಿದ್ಯುತ್‌ ತಂತಿ ತೆರವು: ಮೂರು ತಿಂಗಳ ಗಡುವು

08:43 PM Feb 03, 2022 | Team Udayavani |

ಬೆಂಗಳೂರು: ರಾಜ್ಯಾದ್ಯಾಂತ ಶಾಲಾ-ಕಾಲೇಜುಗಳ ಬಳಿ ಹಾಗೂ ಅವುಗಳ ಕಟ್ಟಡಗಳ ಮೇಲೆ ಹಾದು ಹೋಗಿರುವ ವಿದ್ಯುತ್‌ ತಂತಿಗಳನ್ನು ಮೂರು ತಿಂಗಳಲ್ಲಿ ತೆರವುಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ವಿದ್ಯುತ್‌ ಪ್ರಸರಣಾ ನಿಗಮ (ಕೆಪಿಟಿಸಿಎಲ್‌)ಕ್ಕೆ ಹೈಕೋರ್ಟ್‌ ಆದೇಶ ನೀಡಿದೆ.

Advertisement

ಈ ವಿಚಾರವಾಗಿ ಹೈಕೋರ್ಟ್‌ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುತಾಜ್‌ ಅವಸ್ಥಿ ಹಾಗೂ ನ್ಯಾ. ಸೂರಜ್‌ ಗೋವಿಂದರಾಜ್‌ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ಈ ನಿರ್ದೇಶನ ನೀಡಿತು.

ವಿಚಾರಣೆ ವೇಳೆ ಕೆಪಿಟಿಸಿಎಲ್‌ ಪರ ವಕೀಲ ಶ್ರೀರಂಗ ವಾದ ಮಂಡಿಸಿ, ರಾಜ್ಯದ ಎಲ್ಲ ಶಿಕ್ಷಣ ಸಂಸ್ಥೆಗಳ ಬಳಿ ಹಾದು ಹೋಗಿರುವ ವಿದ್ಯುತ್‌ ಮಾರ್ಗಗಳನ್ನು ಗುರುತಿಸುವ ಮತ್ತು ಅವುಗಳನ್ನು ತೆರವುಗೊಳಿಸುವ ಕಾರ್ಯವನ್ನು ಎಸ್ಕಾಂಗಳು ಆರಂಭಿಸಿವೆ. ಸುಮಾರು 5 ಸಾವಿರಕ್ಕೂ ಅ ಧಿಕ ಸ್ಥಳಗಳಲ್ಲಿ ಶಾಲಾ-ಕಾಲೇಜುಗಳ ಬಳಿ ವಿದ್ಯುತ್‌ ತಂತಿ ಹಾದು ಹೋಗಿರುವುದನ್ನು ಗುರುತಿಸಲಾಗಿದೆ, ಅವುಗಳನ್ನು  ಹಂತ ಹಂತವಾಗಿ ತೆರವುಗೊಳಿಸಬೇಕಾಗುತ್ತದೆ, ಅದಕ್ಕಾಗಿ ಕನಿಷ್ಠ ನಾಲ್ಕೈದು ತಿಂಗಳು ಕಾಲಾವಕಾಶಬೇಕು ಎಂದರು.

ಕೆಪಿಟಿಸಿಎಲ್‌ ಪರ ವಕೀಲರ ಮನವಿ ಪರಿಗಣಿಸಿದ ನ್ಯಾಯಪೀಠ, ತೆರವು ಕಾರ್ಯ ಮುಂದುವರಿಸಿ, ಮುಂದಿನ ವಿಚಾರಣೆ ವೇಳೆ ವರದಿ ಸಲ್ಲಿಸಿ ಎಂದು ನಿರ್ದೇಶಿಸಿ ವಿಚಾರಣೆಯನ್ನು ಮಾ.11ಕ್ಕೆ ಮುಂದೂಡಿತು.

Advertisement

Udayavani is now on Telegram. Click here to join our channel and stay updated with the latest news.

Next