Advertisement

ಮೂವರು ಚುನಾವಣಾ ವೀಕ್ಷಕರ ನೇಮಕ

11:47 AM Mar 29, 2019 | Team Udayavani |

ಬೆಂಗಳೂರು: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬೆಂಗಳೂರು ಉತ್ತರ ಕ್ಷೇತ್ರಕ್ಕೆ ಮೂವರು ಚುನಾವಣಾ ವೀಕ್ಷಕರನ್ನು ಭಾರತ ಚುನಾವಣಾ ಆಯೋಗ ನೇಮಿಸಿದೆ. ಚುನಾವಣೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಬರುವಂತಹ ಅಹವಾಲುಗಳು, ದೂರುಗಳು ಹಾಗೂ ಮನವಿಗಳಿದ್ದರೆ ಮೂವರು ಅಧಿಕಾರಿಗಳಿಗೆ ತಿಳಿಸಬಹುದಾಗಿದೆ.

Advertisement

ಅದರಂತೆ ಯಶವಂತಪುರ ಹಾಗು ದಾಸರಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಚುನಾವಣಾ ವೀಕ್ಷಕರಾಗಿ ಪಿ.ಎಸ್‌.ರೆಡ್ಡಿ ಅವರನ್ನು ನೇಮಿಸಿದ್ದು, ಸಾರ್ವಜನಿಕರು 73789 14111ಗೆ ಕರೆ ಮಾಡುವ ಮೂಲಕ ಅವರನ್ನು ಸಂಪರ್ಕಿಬಹುದಾಗಿದೆ.

ಅದೇ ರೀತಿ ಕೃಷ್ಣರಾಜಪುರ, ಬ್ಯಾಟರಾಯನಪುರ, ಹೆಬ್ಟಾಳ ಮತ್ತು ಪುಲಿಕೇಶಿನಗರ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಚುನಾವಣಾ ವೀಕ್ಷಕರಾಗಿ ಟಿ.ಎನ್‌.ವೆಂಕಟೇಶ್‌ (90876 07776 ) ಹಾಗೂ ಮಹಾಲಕ್ಷ್ಮೀ ಬಡಾವಣೆ ಹಾಗೂ ಮಲ್ಲೇಶ್ವರವ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಚುನಾವಣಾ ವೀಕ್ಷಕರಾಗಿ ರೆಡ್ಡಿ ಶಂಕರ್‌ಬಾಬು (88105 21428) ನೇಮಕಗೊಂಡಿದ್ದಾರೆ.

ಸಾರ್ವಜನಿಕರು ಪ್ರತಿದಿನ ಬೆಳಗ್ಗೆ 9 ರಿಂದ 10 ಗಂಟೆಯವರೆಗೆ ಕುಮಾರಕೃಪ ಅತಿಥಿ ಗೃಹದಲ್ಲಿ ಚುನಾವಣಾ ವೀಕ್ಷಕರನ್ನು ಖುದ್ದಾಗಿ ಭೇಟಿ ಮಾಡಿ ಅಹವಾಲುಗಳು, ದೂರುಗಳು ಹಾಗೂ ಮನವಿಗಳನ್ನು ಸಲ್ಲಿಸಬಹುದಾಗಿದೆ ಎಂದು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿಗಳೂ ಆದ ಬೆಂಗಳೂರು ನಗರ ಜಿಲ್ಲಾಧಿಕಾರಿ ಬಿ.ಎಂ.ವಿಜಯಶಂಕರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next