Advertisement

ಚಿಕ್ಕಮಗಳೂರು: ಗಣಪತಿ ವಿಸರ್ಜಿಸಿ ಬರುವಾಗ ವಿದ್ಯುತ್ ಶಾಕ್ ಹೊಡೆದು ಮೂವರು ಸಾವು

01:51 PM Sep 07, 2022 | Team Udayavani |

ಚಿಕ್ಕಮಗಳೂರು : ಗಣಪತಿ ವಿಸರ್ಜಿಸಿ ಬರುವಾಗ ವಿದ್ಯುತ್ ಶಾಕ್ ನಿಂದ ಮೂವರು ಸಾವನ್ನಪ್ಪಿದ ದಾರುಭ ಘಟನೆ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಬಿ.ಹೊಸಹಳ್ಳಿ ಗ್ರಾಮದಲ್ಲಿ ಘಟನೆ ಮಂಗಳವಾರ ರಾತ್ರಿ  ನಡೆದಿದೆ.

Advertisement

ರಾಜು (47) ರಚನಾ (22) ಪಾರ್ವತಿ (28) ಮೃತ ದುರ್ಧೈವಿಗಳೆಂದು ತಿಳಿದು ಬಂದಿದೆ. ಟ್ರ್ಯಾಕ್ಟರ್ ನಲ್ಲಿದ್ದ ಪೆಂಡಾಲ್ ಗೆ (ಅಲಂಕಾರಗೊಂಡಿದ್ದ ಕಮಾನ್) ವಿದ್ಯುತ್ ತಂತಿ ತಗುಲಿದ ಪರಿಣಾಮ ಈ ಘಟನೆ ನಡೆದಿದೆ.

ಘಟನೆಯಲ್ಲಿ ಆರು ಜನ ಗಂಭೀರ ಗಾಯಗೊಂಡಿದ್ದು,ಅವರನ್ನು ಮೂಡಿಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರ ಗಾಯಗೊಂಡ ಸಂಗೀತ, ಪಲ್ಲವಿ ಅವರನ್ನು ಹಾಸನಕ್ಕೆ ರವಾನಿಸಲಾಗಿದೆ.

ಇಂಜಿನ್ ಮೇಲೆ ಕೂತಿದ್ದ ಡ್ರೈವರ್ ಅಪಾಯದಿಂದ ಪಾರಾಗಿದ್ದಾರೆ.

ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next