Advertisement

ಕಲುಷಿತ ನೀರು ಸೇವಿಸಿ ಮೂವರ ಸಾವು 50 ಜನರು ಅಸ್ವಸ್ಥ 

08:19 AM Feb 12, 2018 | Team Udayavani |

ಭದ್ರಾವತಿ : ಕಲುಷಿತ ನೀರು ಸೇವಿಸಿ ಮೂವರು ಸಾವನ್ನಪ್ಪಿ 50ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಮೈದೊಳಲು ಗ್ರಾಮದಲ್ಲಿ ಸಂಭವಿಸಿದೆ. 

Advertisement

ಮೃತರಲ್ಲಿ ಮೈದೊಳಲು ಗ್ರಾಮದ ನಿವಾಸಿಗಳಾದ ಹನುಮಂತಪ್ಪ (42) ಶಿವಪ್ಪ (75) ಪಂಚಾಕ್ಷರಿ (72) ಎಂದು ತಿಳಿದುಬಂದಿದೆ. ಗಂಭೀರವಾಗಿ ಅಸ್ವಸ್ಥಗೊಂಡ 9 ಜನರಿಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು,  ಉಳಿದವರಿಗೆ ಶಿವಮೊಗ್ಗ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 

ಡಾ.ಎಂ.ಲೋಕೇಶ್, ಜಿಲ್ಲಾ ಪಂಚಾಯತ್ ಸಿಇಓ ರಾಕೇಶ್ ಕುಮಾರ್, ಜಿಲ್ಲಾ ಅರೋಗ್ಯ ಅಧಿಕಾರಿ ಹನುಮಂತ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಸ್ಥಳೀಯರ ಆಕ್ರೋಶ: ಗ್ರಾಪಂ ಸಿಬ್ಬಂದಿ ನೀರಿನ ಮೂಲಗಳನ್ನು ವರ್ಷವಾದರೂ ಸcತ್ಛಗೊಳಿಸುವುದಿಲ್ಲ. ಕಳೆದ ವರ್ಷ ಗ್ರಾಮದಲ್ಲಿ ವಾಂತಿ ಬೇಧಿಯಾದಾಗ ಸ್ವತ್ಛಗೊಳಿಸಿದ್ದು ಬಿಟ್ಟರೆ ಇಲ್ಲಿಯವರೆಗೆ ನೀರಿನ ಟ್ಯಾಂಕನ್ನು ಸ್ವತ್ಛಗೊಳಿಸಿಲ್ಲ. ವಾಂತಿ ಬೇಧಿಯಿಂದ ಅಸ್ವಸ್ಥರಾಗಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಆಸ್ಪತ್ರೆಯ ಖರ್ಚು ವೆಚ್ಚಗಳನ್ನು ಗ್ರಾಪಂ ಭರಿಸಬೇಕು. ಮೃತಪಟ್ಟವರಿಗೆ ಪರಿಹಾರ ನೀಡಬೇಕು ಎಂದು ಅಧಿಕಾರಿಗಳನ್ನು ಒತ್ತಾಯಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next