Advertisement

Arrested: ಗಾಂಜಾ ಸೇವಿಸಿದ ಮೂವರ ಬಂಧನ

09:02 PM Mar 21, 2024 | Team Udayavani |

ಪುತ್ತೂರು: ನಗರದ ಎರಡು ಕಡೆ ನಡೆಸಿದ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ಗಾಂಜಾ ಸೇವಿಸಿ ನಶೆಯಲ್ಲಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

Advertisement

ನೆಲ್ಲಿಕಟ್ಟೆ ಖಾಸಗಿ ಬಸ್‌ ನಿಲ್ದಾಣದ ಸಾರ್ವಜನಿಕ ಸ್ಥಳದಲ್ಲಿ ಅನುಚಿತವಾಗಿ ವರ್ತಿಸುತ್ತಿದ್ದ ಬಗ್ಗೆ ಮಾಹಿತಿ ಬಂದ ಮೇರೆಗೆ ಪುತ್ತೂರು ನಗರ ಪೊಲೀಸ್‌ ಠಾಣೆ ಎಸ್‌.ಐ. ಸುಬ್ರಹ್ಮಣ್ಯ ಅವರ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ನಶೆಯಲ್ಲಿದ್ದ ಬೈಪಾಸ್‌ ರಸ್ತೆಯ ಖಲಂದರ್‌ ಶಾಹ್‌ನನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದರು. ಈ ವೇಳೆ ಆತ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಪುತ್ತೂರು ಪುರಭವನದ ಬಳಿ ಸಾರ್ವಜನಿಕ ಪ್ರದೇಶದಲ್ಲಿ ಇಬ್ಬರು ವ್ಯಕ್ತಿ ಅನುಚಿತವಾಗಿ ವರ್ತಿಸುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ ಪುತ್ತೂರು ನಗರ ಪೊಲೀಸ್‌ ಠಾಣಾ ಇನ್‌ ಸ್ಪೆಕ್ಟರ್‌ ಸತೀಶ್‌ ಜಿ.ಜೆ. ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಕಸಬಾ ಗ್ರಾಮದ ಬಪ್ಪಳಿಗೆ ನಿವಾಸಿ ಬಿ. ಉಮ್ಮರ್‌ ಫಾರೂಕ್‌ (36) ಹಾಗೂ ಮಂಗಳೂರು ತಾಲೂಕಿನ ಉಳ್ಳಾಲ ಮುಕ್ಕಚೇರಿಯ ನಿವಾಸಿ ಕೆ. ಮೊಹಿದ್ದಿನ್‌ (43) ನನ್ನು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next