Advertisement

ಹಳೇ ವೈಷಮ್ಯಕ್ಕೆ ಮೂವರು ಬಲಿ

11:47 PM May 26, 2020 | Hari Prasad |

ಚಾಮರಾಜನಗರ: ಹಳೇ ವೈಷಮ್ಯದ ಕಾರಣದಿಂದ ವ್ಯಕ್ತಿಗಳ ನಡುವೆ ಜಗಳ ನಡೆದು ಅದು ಮೂರು ಜನರ ಸಾವಿನಲ್ಲಿ ಅಂತ್ಯಗೊಂಡಿರುವ ದಾರುಣ ಘಟನೆ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ಮಂಗಳವಾರ ರಾತ್ರಿ ನಡೆದಿದೆ.

Advertisement

ಪಟ್ಟಣದ ಝಾಕಿರ್ ಹುಸೇನ್ ನಗರದ ನಿವಾಸಿಗಳಾದ ಜಕಾವುಲ್ಲಾ (30), ಕೈಸರ್ (29), ಇಕ್ರಿಸ್ (30) ಕೊಲೆಗೀಡಾದವರು ಮತ್ತು ನಸ್ರುಲ್ಲಾ (30) ಎಂಬಾತ ತೀವ್ರವಾಗಿ ಗಾಯಗೊಂಡು ಮೈಸೂರಿನ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಹಳೆಯ ವೈಷಮ್ಯದಿಂದ ಪ್ರಾರಂಭವಾದ ಜಗಳ ಬಳಿಕ ಅದು ವಿಕೋಪಕ್ಕೆ ತಿರುಗಿ ಅವರೆಲ್ಲರೂ ಚಾಕು ಹಾಗೂ ಮಚ್ಚಿನಿಂದ ಹೊಡೆದಾಡಿಕೊಂಡಿದ್ದಾರೆ ಈ ಜಗಳ ಮೂವರ ಕೊಲೆಯಲ್ಲಿ ಪರ್ಯಾವಸನವಾಗಿದೆ.

ಘಟನಾ ಸ್ಥಳದಲ್ಲಿ ಪ್ರಕ್ಷುಬ್ಧ ವಾತಾವರಣ ಇದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆನಂದ್ ಕುಮಾರ್, ಡಿವೈಎಸ್ಪಿ ಮೋಹನ್ ಸರ್ಕಲ್ ಇನ್ಸ್ ಪೆಕ್ಟರ್ ಮಹದೇವಸ್ವಾಮಿ, ಎಸ್ ಐ ಲತೇಶ್ ಕುಮಾರ್ ಭೇಟಿ ನೀಡಿದ್ದಾರೆ. ಗುಂಡ್ಲುಪೇಟೆ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next