Advertisement

ರಾಜ್ಯಸಭೆಯಲ್ಲಿ ಮೂರು ಸ್ಥಾನ ಗೆಲುವು: ಸಿಎಂಗೆ ಪ್ರಧಾನಿ, ಶಾ , ನಡ್ಡಾ ಕರೆ

11:09 PM Jun 10, 2022 | Team Udayavani |

ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಮೂರು ಬಿಜೆಪಿ ಅಭ್ಯರ್ಥಿಗಳು ಗೆದ್ದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ದೂರವಾಣಿ ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.

Advertisement

ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಮೂವರು ಅಭ್ಯರ್ಥಿಗಳು ಗೆದ್ದಿರುವುದಕ್ಕೆ ಸಂತಸ ವ್ಯಕ್ತಪಡಿಸಿ ಅಲ್ಪ ಮತಗಳ ಕೊರತೆ ಇದ್ದರೂ ತಾಂತ್ರಿಕವಾಗಿ ಮೂವರು ಬಿಜೆಪಿ ಅಭ್ಯರ್ಥಿಗಳು ಗೆಲ್ಲುವಂತೆ ನೋಡಿಕೊಂಡಿರುವುದಕ್ಕಾಗಿ ಶುಭಾಶಯ ಕೋರಿದರು. ರಾಜ್ಯಸಭೆಯಲ್ಲಿ ಬಿಜೆಪಿ ಸಂಖ್ಯಾಬಲ ಹೆಚ್ಚಳಕ್ಕೆ ಕರ್ನಾಟಕದ ಕೊಡುಗೆ ಇದಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಇದನ್ನೂ ಓದಿ : ರಾಜ್ಯ ಸಭೆ ಚುನಾವಣೆ: ಬಿಜೆಪಿಗೆ 3, ಕಾಂಗ್ರೆಸ್ ಗೆ 1, ಜೆಡಿಎಸ್ ಗೆ ಆಘಾತ

ವು ಇದಕ್ಕಾಗಿ ಪಟ್ಟ ಶ್ರಮ ಇಂದು ಸಾರ್ಥಕ ವಾಗಿದೆ ಎಲ್ಲ ತಂತ್ರಗಳು ಫಲಿಸಿವೆ ಎಂದು ನಡ್ಡಾ ಸಿಎಂ ಗೆ ಪ್ರಶಂಸಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next