Advertisement

ಈಜಲು ಹೋಗಿದ್ದ ಮೂವರು ಬಾಲಕರು ಕೆರೆಯಲ್ಲಿ ಮುಳುಗಿ ಸಾವು

04:14 PM Apr 04, 2021 | Team Udayavani |

ಹಾವೇರಿ: ಈಜಲು ಹೋಗಿದ್ದ ಮೂವರು ಬಾಲಕರು ಕೆರೆಯಲ್ಲಿ ಮುಳುಗಿ ಮೃತಪಟ್ಟ ದುರ್ಘಟನೆ ಜಿಲ್ಲೆಯ ಹಾನಗಲ್ಲ ತಾಲೂಕಿನ ಮಂತಗಿ ಗ್ರಾಮದ ಕಟ್ಟಿಕೆರೆಯಲ್ಲಿ ರವಿವಾರ ನಡೆದಿದೆ.

Advertisement

ಮೃತ ಬಾಲಕರನ್ನು ಅಖ್ತರ್ ರಜಾ ಯಳವಟ್ಟಿ (16 ವ), ಅಹ್ಮದ್‌ರಜಾ ಅಂಚಿ(16 ವ) ಹಾಗೂ ಸಾಹಿಲ್ ಡೊಂಗ್ರಿ (17 ವ) ಎಂದು ಗುರುತಿಸಲಾಗಿದೆ. ಮೂವರು ಬಾಲಕರು ಸೇರಿಕೊಂಡು ಗ್ರಾಮದ ಬಳಿ ಇರುವ ಕೆರೆಗೆ ಈಜಲು ತೆರಳಿದ್ದಾಗ ಈ ದುರ್ಘಟನೆ ಸಂಭವಿಸಿದೆ.

ಇದನ್ನೂ ಓದಿ:ಕೇರಳದ ಮೆಡಿಕಲ್ ವಿದ್ಯಾರ್ಥಿಗಳ ಸಖತ್ ಸ್ಟೆಪ್ : ವಿಡಿಯೋ ವೈರಲ್

ಸ್ಥಳೀಯರು ಮೂವರು ಬಾಲಕರ ಮೃತದೇಹವನ್ನು ಕೆರೆಯಿಂದ ಹೊರಗಡೆ ತೆಗೆದಿದ್ದಾರೆ. ಮೃತ ಬಾಲಕರ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ.

ಘಟನೆ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹಾನಗಲ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹಾನಗಲ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next